ಕಿರುತೆರೆಯಲ್ಲಿ ವೀಕ್ಷಕರ ಗಮನ ಸೆಳೆಯಲು ಪ್ರಾರಂಭವಾಗುತ್ತಿದೆ ಹೊಸ ಧಾರಾವಾಹಿ 'ಯಡಿಯೂರು ಸಿದ್ಧಲಿಂಗೇಶ್ವರ'. ಹೇಗಿದೆ ಹರೀಶ್ ರಾಜ್‌ ಹೊಸ ಲುಕ್? 

ಸ್ಯಾಂಡಲ್‌ವುಡ್‌ನಲ್ಲಿ ವಿಭಿನ್ನ ನಿರ್ದೇಶಕರಾಗಿ ಗುರುತಿಸಿಕೊಂಡಿರುವ ನವೀನ್ ಕೃಷ್ಣ ಹೊಸ ಧಾರಾವಾಹಿಗೆ ಆ್ಯಕ್ಷನ್ ಕಟ್ ಹೇಳಲು ಸಜ್ಜಾಗಿದ್ದಾರೆ. ಈ ಧಾರಾವಾಹಿಗೆ 'ಯಡಿಯೂರು ಸಿದ್ಧಲಿಂಗೇಶ್ವರ' ಎಂಬ ಶೀರ್ಷಿಗೆ ಇಡಲಾಗಿದ್ದು, ಬಿಗ್ ಬಾಸ್ ಖ್ಯಾತಿಯ ಹರೀಶ್ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗುಡ್‌ ನ್ಯೂಸ್ ಕೊಟ್ಟ ಬಿಗ್ ಬಾಸ್ ಹರೀಶ್ ರಾಜ್ ದಂಪತಿ! 

ಧಾರಾವಾಹಿ ಚಿತ್ರೀಕರಣ ಪ್ರಾರಂಭವಾಗಿದೆ. ಕೆಲವೊಂದು ಫೋಟೋ ಹಾಗೂ ವಿಡಿಯೋಗಳನ್ನು ಹರೀಶ್ ರಾಜ್‌ ಇನ್‌ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಹಿರಿಯ ನಟ ಶಿವರಾಮ್‌ ಅವರೂ ಈ ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ. ಧಾರಾವಾಹಿಯಲ್ಲಿ ಯುವ ಮಲ್ಲಿಕಾರ್ಜುನನ ಪಾತ್ರದಲ್ಲಿ ಹರೀಶ್ ರಾಜ್‌ ಅಭಿನಯಿಸಲಿದ್ದು, ಅಧ್ಯಾತ್ಮಿಕ ಒಲವು ಮತ್ತು ಲೌಕಿಕ ಜ್ಞಾನದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಲು ಯತ್ನಿಸಲಾಗುತ್ತದೆ. 

View post on Instagram

ಬೆಳ್ಳಿ ತೆರೆಯ ಅದ್ಭುತ ನಟನಾಗಿ ಮಿಂಚುತ್ತಿದ್ದ ಹರೀಶ್‌ ರಾಜ್‌ ಅವರಿದೆ ಬಿಗ್ ಬಾಸ್ ರಿಯಾಲಿಟಿ ಶೋ ನಂತರ ಕಿರುತೆರೆಯಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ. ಸಿನಿಮಾಗಳಲ್ಲಿ ಹೆಚ್ಚಾಗಿ ಭಕ್ತಿ ಪ್ರಧಾನ ಪಾತ್ರಗಳಲ್ಲಿ ಮಿಂಚುತ್ತಿದ್ದು, ಕಿರುತೆರೆಯಲ್ಲಿ ಇದೇ ಮೊದಲು ಇಂಥ ಪಾತ್ರಕ್ಕೆ ಸೈ ಎಂದು ಹೇಳಿಕೊಂಡಿದ್ದಾರೆ. 

ಹರೀಶ್‌ ರಾಜ್‌ಗೂ ಸಿಗ್ತು ಕಿಚ್ಚನಿಂದ ದುಬಾರಿ ಗಿಫ್ಟ್? 

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಮಹಾ ಭಾರತ ರಿಯಾಲಿಟಿ ಶೋನಲ್ಲಿ ಹರೀಶ್ ರಾಜ್‌ ನಿರೂಪಣೆ ಮಾಡುತ್ತಿದ್ದಾರೆ. ಪ್ರತಿ ವೀಕೆಂಡ್‌ನಲ್ಲಿಯೂ ಡಿಫರೆಂಟ್‌ ಲುಕ್‌ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಒಟ್ಟಿನಲ್ಲಿ ಹರೀಶ್ ರಾಜ್‌ ಕಿರುತೆರೆ ವೀಕ್ಷಕರಿಗೆ ಮನೋರಂಜನೆ ನೀಡುವುದರಲ್ಲಿ ಅನುಮಾವಿಲ್ಲ.