Asianet Suvarna News Asianet Suvarna News

ಬಿಗ್​ಬಾಸ್​ಗೆ ಕ್ಷಣಗಣನೆ... ಸೀಸನ್​ 11ರ ಕುರಿತು ನಟ ವಿಜಯ ರಾಘವೇಂದ್ರ ಮನದಾಳದ ಮಾತೇನು?

ಬಿಗ್​ಬಾಸ್​ ಸೀಸನ್​-11 ಇನ್ನೇನು ಆರಂಭವಾಗಲಿದೆ. ಇದಕ್ಕೂ ಮುನ್ನ ಸೀಸನ್​-1ರ ವಿಜೇತ, ನಟ ವಿಜಯ ರಾಘವೇಂದ್ರ ಅವರು ತಮ್ಮ ಮನದಾಳದ ಮಾತುಗಳನ್ನು ಆಡಿದ್ದಾರೆ. ಅವರು ಹೇಳಿದ್ದೇನು?
 

Bigg Boss Season 1 winner  Vijaya Raghavendra spoke about his journey in biggboss house suc
Author
First Published Sep 26, 2024, 1:20 PM IST | Last Updated Sep 26, 2024, 3:14 PM IST

ಬಿಗ್​ಬಾಸ್​ ಕನ್ನಡದ 11ನೇ ಸೀಸನ್​ ಯಾವಾಗ ಶುರುವಾಗುತ್ತೆ ಎಂದು ತುದಿಗಾಲಿನಲ್ಲಿ ನಿಂತಿರೋ ವೀಕ್ಷಕರು ಇನ್ನು 10 ದಿನವಷ್ಟೇ ಕಾಯಬೇಕಿದೆ.  ಬಿಗ್​ಬಾಸ್​ ಪ್ರೇಮಿಗಳಿಗೆ ಇದಾಗಲೇ ತಿಳಿದಿರುವಂತೆ ಇದೇ ಸೆಪ್ಟೆಂಬರ್ 29 ರಂದು  11ನೇ ಸೀಸನ್​ ಆರಂಭವಾಗಲಿದೆ. ಇದರ ಹೋಸ್ಟ್​ ಆಗಿ ಅವರು ಬರ್ತಾರೆ, ಇವರು ಬರ್ತಾರೆ ಎಂದು ಹಲವಾರು ಗಾಳಿಸುದ್ದಿಗಳು ಕೆಲ ತಿಂಗಳುಗಳಿಂದ ಹರಿದಾಡುತ್ತಲೇ ಇದೆ. ಆದರೆ,  ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಫುಲ್​ ಖುಷ್​ ಆಗುವ ರೀತಿಯಲ್ಲಿ ಬಿಗ್​ಬಾಸ್​ ಪ್ರೊಮೋದಲ್ಲಿ ಅವರೇ ಕಾಣಿಸಿಕೊಂಡು ಹಿರಿಹಿರಿ ಹಿಗ್ಗುವಂತೆ ಮಾಡಿದ್ದಾರೆ.  10 ವರ್ಷದಿಂದ ಒಂದು ಲೆಕ್ಕ, ಈಗಿಂದ ಬೇರೆನೇ ಲೆಕ್ಕ ಎಂದ ಕಿಚ್ಚ ಸುದೀಪ್: ಸೆ.29 ರಿಂದ ಬಿಗ್‌ಬಾಸ್‌ ಹೊಸ ಅಧ್ಯಾಯ ಶುರು ಎಂದು ಇದಾಗಲೇ ಸುದೀಪ್​ ಪ್ರೊಮೋದಲ್ಲಿ ಹೇಳಿರುವ ಕಾರಣ, ಈ ಬಾರಿಯ ವಿಶೇಷತೆ ಏನು ಎಂಬ ಬಗ್ಗೆ ಫ್ಯಾನ್ಸ್​ ಬಿಟ್ಟ ಕಣ್ಣುಗಳಿಂದ ಕಾಯುತ್ತಿದ್ದಾರೆ.
 
ಅದರ ನಡುವೆಯೇ, ಇದೀಗ ಬಿಗ್​ಬಾಸ್​ನ ಮೊದಲ ಸೀಸನ್​ ವಿಜೇತ, ಸ್ಟಾರ್​ ನಟ, ಚಿನ್ನಾರಿ ಮುತ್ತ ವಿಜಯ್​ ರಾಘವೇಂದ್ರ ಅವರು ಹೊಸ ಸೀಸನ್​ ಬಗ್ಗೆ ಒಂದಿಷ್ಟು ಮಾತನಾಡಿದ್ದಾರೆ. ಬಿಗ್​ಬಾಸ್​ 1ರಲ್ಲಿ ಸುಮಾರು ನೂರು ದಿನಗಳ ಕಾಲ ನನ್ನನ್ನು  ನೀವು ಆಶೀರ್ವಾದ ಮಾಡಿದ್ದೀರಿ. ಅಲ್ಲಿ ದೀರ್ಘ ಅವಧಿಯವರೆಗೆ  ಇದ್ದು ಜೀವಿಸಿ, ಅನುಭವಿಸಿ ಬಂದಿದ್ದೇನೆ.  ನನ್ನ ಪ್ರಕಾರ ನನ್ನ ಜೀವನದಕ್ಕೆ ಮತ್ತು ಬಿಗ್​ಬಾಸ್​ ಮನೆಗೆ ಎಂಟ್ರಿ ಕೊಡುವ ನನ್ನ ಸ್ನೇಹಿತರೆಲ್ಲಾ ಇದರಿಂದ ಆಗಿರುವ ದೊಡ್ಡ ಅನುಭವ ಎಂದರೆ,  ಅವರವರ ಜೀವನ, ಅವರ ವ್ಯಕ್ತಿತ್ವ,  ಅವರ ಅಪ್ಸ್​ ಆ್ಯಂಡ್​ ಡೌನ್ಸ್​, ಅವರಲ್ಲಿ ಇರುವ ಕೆಟ್ಟತನ-ಒಳ್ಳೆಯತನ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸಲು ಅವಕಾಶ ಸಿಕ್ಕಿದೆ. ನಮ್ಮ ನಡವಳಿಕೆಯ ಬಗ್ಗೆ, ತಪ್ಪುಗಳು ಇದ್ದರೆ ಅದನ್ನು ಸರಿಪಡಿಸಿ  ಕರೆಕ್ಷನ್​ ಮಾಡುವ ಅವಕಾಶ ಸಿಕ್ಕಿದೆ ಎಂದಿದ್ದಾರೆ ವಿಜಯ ರಾಘವೇಂದ್ರ.

ಬಿಗ್​ಬಾಸ್​ಗೆ ಕ್ಷಣಗಣನೆ: ಇವರೇ ನೋಡಿ ದೊಡ್ಮನೆ ಹೋಗ್ತಿರೋ ಸಂಭಾವ್ಯ ಸ್ಪರ್ಧಿಗಳು- ನಿಮ್ಮ ನೆಚ್ಚಿನ ಸ್ಟಾರ್ ಯಾರು?

ಪ್ರತಿವಾರವೂ ಸುದೀಪಣ್ಣ ಬಂದು ಸ್ಪರ್ಧಿಗಳ ತಪ್ಪು-ಒಪ್ಪುಗಳನ್ನು ಹೇಳಿ ಹೋಗ್ತಾರೆ. ನನ್ನ ಜೀವನದ ಸುಂದರ ಅನುಭವಗಳನ್ನು ಆ ನೂರು ದಿನಗಳು ಅನುಭವಿಸಿದ್ದೇನೆ. ಇದನ್ನೇ ಪ್ರತಿ ಸ್ಪರ್ಧಿಯೂ ಅನುಭವಿಸುತ್ತಾರೆ. ಎಲ್ಲರಿಗೂ ಅವರ ಜೀವನದ ಕನ್ನಡಿ ಹಿಡಿದಂತೆ ಇದೆ ಈ ವೇದಿಕೆ ಎನ್ನುತ್ತಲೇ ಸೀಸನ್​-11ರ ಎಲ್ಲಾ ಸ್ಪರ್ಧಿಗಳಿಗೆ ಗುಡ್​ಲಕ್​ ಹೇಳುವ ಮೂಲಕ ಶುಭಾಶಯ ಕೋರಿದ್ದಾರೆ ನಟ ವಿಜಯ ರಾಘವೇಂದ್ರ.   

ಅಂದಹಾಗೆ, ಬಿಗ್​ಬಾಸ್​ನಲ್ಲಿ ಈ ಬಾರಿ ಒಳ ಹೋಗುವವರು ಯಾರು ಎಂಬ ಬಗ್ಗೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ರಿಲೀಸ್​ ಆಗಿದ್ದರೂ ಅವರೇ ಫೈನಲ್​ ಎಂದು ಇದುವರೆಗೆ ತಿಳಿದಿಲ್ಲ. ರಾಜಾ ರಾಣಿ ಗ್ರ್ಯಾಂಡ್​ ಫಿನಾಲೆ ನೋಡಿ ಎಂದು ಕಿಚ್ಚ ಸುದೀಪ್​ ಹೇಳಿದ್ದಾರೆ. ಸ್ಯಾಂಡಲ್​ವುಡ್​ ಬ್ಯೂಟಿ, ಎವರ್​ಗ್ರೀನ್​ ತಾರೆ  ಪ್ರೇಮಾ, ಜನಪ್ರಿಯ ಟಿ.ವಿ ನಿರೂಪಕ ಹರೀಶ್ ನಾಗರಾಜು, 'ದಾಸ ಪುರಂದರ' ಮತ್ತು 'ಬೃಂದಾವನ'ದಲ್ಲಿ ನಟಿಸಿರುವ ನಟಿ ಅಮೂಲ್ಯ ಭಾರದ್ವಾಜ್,  'ಗಿಚ್ಚಿ ಗಿಲಿಗಿಲಿ ಸೀಸನ್​ 3' ರ ರನ್ನರ್ ಅಪ್ ಮಾನಸಾ ತುಕಾಲಿ ಸಂತೋಷ್,  ಹಾಸ್ಯನಟ ಹುಲಿ ಕಾರ್ತಿಕ್, 'ಮಗಳು ಜಾನಕಿ' ಚಿತ್ರದಲ್ಲಿನ ಪಾತ್ರಕ್ಕೆ ಹೆಸರುವಾಸಿಯಾಗಿರುವ ಗಾಯಕಿ ಮತ್ತು ನಟಿ ಐಶ್ವರ್ಯಾ ರಂಗರಾಜನ್, ನಟಿ ಭವ್ಯಾ ಗೌಡ, ನಟ ದೀಪಕ್​ ಗೌಡ, ಕನ್ನಡ ಚಲನಚಿತ್ರೋದ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಂಗಳೂರಿನ ಪ್ರಖ್ಯಾತ ಅವಳಿ ಸಹೋದರಿಯರಾದ ಅದ್ವಿತಿ ಮತ್ತು ಅಶ್ವಿತಿ ಶೆಟ್ಟಿ , ರೀಲ್ಸ್ ರೇಷ್ಮಾ, ಚಂದ್ರಪ್ರಭಾ, ರಾಘವೇಂದ್ರ, ಜಾಹ್ನವಿ, ಶರ್ಮಿತಾ ಗೌಡ, ತ್ರಿವಿಕ್ರಮ್, ಸುಕೃತಾ ನಾಗ್, ಗೌತಮಿ ಜಾಧವ್, ಮತ್ತು ಶರತ್ ಕುಮಾರ್ ಹೀಗೆ ಹಲವಾರು ಹೆಸರುಗಳು ಸಂಭಾವ್ಯ ಪಟ್ಟಿಯಲ್ಲಿ ಇವೆ.  ಆ್ಯಂಕರ್ ಸುಕನ್ಯಾ, ಒಲವಿನ ನಿಲ್ದಾಣದ ನಾಯಕ ಅಕ್ಷಯ್ ನಾಯಕ್, ಕನ್ನಡತಿ ಸೀರಿಯಲ್​ನಲ್ಲಿ ಹರ್ಷನ ತಂಗಿ ಸುಚಿಯಾಗಿದ್ದ ನಟಿ ಅಮೃತಾ ಮೂರ್ತಿ, ಭೀಮಾ ಚಿತ್ರದಲ್ಲಿ ಖಡಕ್ ಪೊಲೀಸ್ ಆಫೀಸರ್ ಆಗಿರುವ ಪ್ರಿಯಾ ಶಠಮರ್ಷಣ ಹೆಸರುಗಳೂ ಕೇಳಿ ಬರುತ್ತಿವೆ. ಆದರೆ ಅಂತಿಮ ಹೆಸರು ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.

ಬಿಗ್​ಬಾಸ್​ಗೆ ಹೊಸ ಚೀಫ್​ ನೇಮಕ: 'ಮನೆಯೇ ಮಂತ್ರಾಲಯ’ ನಟ ನಿಖಿಲ್​ಗೆ ಒಲಿಯಿತು ಪಟ್ಟ

 

Latest Videos
Follow Us:
Download App:
  • android
  • ios