Asianet Suvarna News Asianet Suvarna News

ವೇದಿಕೆ ಮೇಲೆ ಕಣ್ಣೀರಿಟ್ಟ ಚಂದನ್ ಶೆಟ್ಟಿ; ನಿವೇದಿತಾಗೆ ಪ್ರಪೋಸ್ ಮಾಡಿದ್ದು ತಪ್ಪಾಯ್ತಾ?

'ರಾಜಾ ರಾಣಿ' ಕಾರ್ಯಕ್ರಮದಲ್ಲಿ ಕಣ್ಣೀರಿಟ್ಟ ಚಂದನ್ ಶೆಟ್ಟಿ. ಮೈಸೂರು ಯುವ ದಸರಾದಲ್ಲಿ ನಡೆದ ಘಟನೆ ನೆನಪಿಸಿಕೊಂಡರೆ ಬೇಸರವಾಗುತ್ತದೆ ಎಂದಿದ್ದಾರೆ.
 

Chandan shetty and Niveditha gowda breaks down in Colors Kannada Raja Rani show vcs
Author
Bangalore, First Published Jul 18, 2021, 11:34 AM IST

ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ರಾಜಾ ರಾಣಿ' ಕಾರ್ಯಕ್ರಮದಲ್ಲಿ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಕೂಡ ಒಂದು ಜೋಡಿ. ನಿನ್ನೆ ಹಾಗೂ ಇಂದು ಪ್ರಸಾರವಾಗುತ್ತಿರುವ ಎಪಿಸೋಡ್‌ನಲ್ಲಿ ಪ್ರತಿ ಜೋಡಿಯೂ ಮನಸ್ಸು ಬಿಚ್ಚಿ ಮಾತನಾಡುತ್ತಾರೆ. ತಮ್ಮಲ್ಲಿರುವ ನೋವುಗಳನ್ನು ಹೇಳಿಕೊಳ್ಳುತ್ತಾರೆ. ಚಂದನ್ ಶೆಟ್ಟಿ ಕೂಡ ಬಹುದಿನಗಳಿಂದ ಕಾಡುತ್ತಿರುವ ನೋವನ್ನು ಹಂಚಿಕೊಂಡಿದ್ದಾರೆ.

2019ರಲ್ಲಿ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯುತ್ತಿದ್ದ ಯುವ ದಸರಾದಲ್ಲಿ ಚಂದನ್ ಶೆಟ್ಟಿ ತಮ್ಮ ಗೆಳತಿ ನಿವೇದಿತಾ ಗೌಡಗೆ ಪ್ರಪೋಸ್ ಮಾಡುತ್ತಾರೆ. ಕಾರ್ಯಕ್ರಮಕ್ಕೆ ನಿವೇದಿತಾಗೆ ಆಹ್ವಾನ ನೀಡದಿದ್ದರೂ ಆಗಮಿಸಿದ್ದರು ಹಾಗೂ ತಮ್ಮ ವೈಯಕ್ತಿಕ ವಿಚಾರಗಳಿಗೆ ವೇದಿಕೆ ಬಳಸಿಕೊಂಡರು ಎಂಬ ಆರೋಪ ಕೇಳಿ ಬಂದಿತ್ತು. ಮೂರ್ನಾಲ್ಕು ದಿನ ಈ ವಿಚಾರವೇ ದೊಡ್ಡ ಸುದ್ದಿ ಆಗಿತ್ತು. 

ನಮ್ಮ ಮದುವೆ ಬಗ್ಗೆ ರಿಯಾಲಿಟಿ ಶೊನಲ್ಲಿ ಖಚಿತ ಪಡಿಸುವೆ: ಸಿಲ್ಲಿ ಲಲ್ಲಿ ರೂಪಾ!

'ನಾನು ವೇದಿಕೆ ಮೇಲೆ ಪ್ರಪೋಸ್ ಮಾಡಿದೆ,  ಅದು ನಿಜಕ್ಕೂ ಕನಸಿನಂತಿತ್ತು. ಆದರೆ ಮರುದಿನ ವಿವಾದ ಆಯ್ತು. ಸಂಪೂರ್ಣ ಖುಷಿ ಒಂದೇ ಕ್ಷಣದಲ್ಲಿ ಹಾಳಾಗೋಯ್ತು' ಎಂದು ನಿವೇದಿತಾ ಹೇಳುತ್ತಾರೆ. 'ಆ ದಿನ ನಾನೊಬ್ಬ ತೆಗೆದುಕೊಂಡ ನಿರ್ಧಾರ...ಇವತ್ತು ಆ ವಿಡಿಯೋ ನೋಡಿದರೆ ಬೇಸರವಾಗುತ್ತದೆ' ಎಂದು ಚಂದನ್ ಶೆಟ್ಟಿ ಕಣ್ಣೀರಿಟ್ಟಿದ್ದಾರೆ. 

ಇದಾದ ನಂತರ ಇಬ್ಬರೂ ಗುರು ಹಿರಿಯರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು ಆನಂತರ ಅದ್ಧೂರಿಯಾಗಿ ಮದುವೆ ಆದರು. ಮದುವೆ ನಂತರ ಲಾಕ್‌ಡೌನ್‌ ಆದ ಕಾರಣ ಸಂಪೂರ್ಣ ಲಾಕ್‌ಡೌನ್‌ ಮನೆಯಲ್ಲಿ ಅಡುಗೆ, ಮನೆ ಕೆಲಸ, ಮ್ಯೂಸಿಕ್ ಅಂತ ಸಮಯ ಕಳೆದೆವು ಎಂದು ವೇದಿಕೆ ಮೇಲೆ ತಮ್ಮ ದಿನಗಳ ಬಗ್ಗೆ ಹೇಳಿಕೊಂಡಿದ್ದಾರೆ.

 

Follow Us:
Download App:
  • android
  • ios