Rakksh Ram: ಬೆಳ್ಳಿತೆರೆಗೆ ನಾಯಕನಾಗಿ ಎಂಟ್ರಿಕೊಟ್ಟ ಗಟ್ಟಿಮೇಳದ ವೇದಾಂತ್; ಪೋಸ್ಟರ್ ರಿಲೀಸ್
ಗಟ್ಟಿಮೇಳದ ಖ್ಯಾತಿಯ ವೇದಾಂತ್ ಅವರ ಹೊಸ ಚಿತ್ರ ಬರುತ್ತಿದ್ದು, ಸ್ಯಾಂಡಲ್ವುಡ್ಗೆ ಎಂಟ್ರಿ ಕೊಡಲಿದ್ದಾರೆ. ಏನಿದು ಹೊಸ ಚಿತ್ರ?
ಇದೀಗ ಕನ್ನಡ ಕಿರುತೆರೆಯ ನಟ-ನಟಿಯರು ಬೆಳ್ಳಿಪರದೆಯ ಮೇಲೆ ಮಿಂಚುವುದು ಸಾಮಾನ್ಯವಾಗಿದೆ. ಇದಾಗಲೇ ಹಲವಾರು ನಟರು ಬೆಳ್ಳಿಪರದೆಗೆ ಕಾಲಿಟ್ಟಿದ್ದಾರೆ. ಇದೀಗ ಈ ಸಾಲಿಗೆ ಸೇರುತ್ತಿದ್ದಾರೆ ಜನಮನ ಗೆದ್ದ ಗಟ್ಟಿಮೇಳ ಧಾರಾವಾಹಿಯ ನಾಯಕ ವೇದಾಂತ್. ಇವರ ನಿಜವಾದ ಹೆಸರು ರಕ್ಷ್ ರಾಮ್ (Rakksh Raam). ಗಟ್ಟಿಮೇಳ ಮಾತ್ರವಲ್ಲದೇ 'ಪುಟ್ಟಗೌರಿ ಮದುವೆ ಧಾರಾವಾಹಿ ಮೂಲಕವೂ ಮಿಂಚಿದ್ದಾರೆ ರಕ್ಷ್. ಇದೀಗ ಇವರು ಆಕ್ಷನ್ ಹೀರೋ ಆಗಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಹೆಸರು ಬರ್ಮ. ಈ ಚಿತ್ರವನ್ನು ಚೇತನ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಈಗಾಗಲೇ ಕನ್ನಡದಲ್ಲಿ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಸಿನಿಮಾಗಳಿಗೆ ನಿರ್ದೇಶನ ಮಾಡಿ ಕಮರ್ಷಿಯಲ್ ನಿರ್ದೇಶಕ ಎಂದೇ ಕರೆಸಿಕೊಳ್ಳುವ ಚೇತನ್ ಕುಮಾರ್, ಬರ್ಮ ಚಿತ್ರವನ್ನು ನಿರ್ದೇಶಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬವಾದ ಇಂದು ಈ ಸಿನಿಮಾದ ಘೋಷಣೆ ಮಾಡಲಾಗಿದೆ. ಈ ಸಿನಿಮಾದಲ್ಲಿ ರಕ್ಷ್ ನಾಯಕ ನಟರಾಗಿ ಮಿಂಚಲಿದ್ದಾರೆ. ಇದರ ಶೀರ್ಷಿಕೆ ಇಂದು ಅನಾವರಣಗೊಳಿಸಿರುವ ಚೇತನ್ ಕುಮಾರ್ (Chetan Kumar) ಅವರು ಬರ್ಮ ಶಬ್ದಕ್ಕೆ ಅರ್ಥವನ್ನೂ ನೀಡಿದ್ದಾರೆ. ಸಂಸ್ಕೃತ ಭಾಷೆಯಲ್ಲಿ ಬರ್ಮ ಎಂದರೆ ಬ್ರಹ್ಮ ವಾಸಿಸುವ ಜಾಗ ಎಂದರ್ಥ ಎಂದಿದ್ದಾರೆ. . 'ಆಯುಧ ಬಳಸುವುದು ಬರೀ ಆಡಂಬರ ಅಲ್ಲ. ಅದೊಂದು ಆಚರಣೆ' ಎಂಬ ಅಡಿಬರಹ ಚಿತ್ರಕ್ಕಿದೆ. ಈ ಮೂಲಕ ಇದೊಂದು ಆಕ್ಷನ್ ಎಂಟರ್ಟೇನರ್ ಚಿತ್ರ ಎನ್ನುವುದನ್ನು ಚೇತನ್ ಕುಮಾರ್ ಅವರು ಸೂಕ್ಷ್ಮವಾಗಿ ಹೇಳಿದ್ದಾರೆ.
ಜೊತೆಜೊತೆಯಲಿ 'ಅನು' ಹಾಟ್ ವಿಡಿಯೋ ವೈರಲ್: ಉಫ್ ನಿಜಕ್ಕೂ ನೀವು ಅವ್ರೇನಾ ಕೇಳಿದ ಫ್ಯಾನ್ಸ್
ಅಂದಹಾಗೆ ನಟರಾಗಿರುವ ಚೇತನ್ ಕುಮಾರ್ ಅವರು ಭರವಸೆಯ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಪುನೀತ್ ರಾಜ್ಕುಮಾರ್ (Puneeth Rajkumar) ಅವರು ನಾಯಕರಾಗಿ ನಟಿಸಿದ ಕೊನೆಯ ಚಿತ್ರ ಎನ್ನುವ ಕಾರಣಕ್ಕೆ ‘ಜೇಮ್ಸ್’ ಭರ್ಜರಿ ನಿರೀಕ್ಷೆ ಮೂಡಿಸಿತ್ತು. ಈ ಸಿನಿಮಾ ರಿಲೀಸ್ ಆದ ಬಳಿಕ ಚೇತನ್ ಅವರು ಬ್ರೇಕ್ ಪಡೆದಿದ್ದರು. ಈಗ ಅವರು ಬರ್ಮಾ ಮೂಲಕ ಕಮ್ ಬ್ಯಾಕ್ ಮಾಡಿದ್ದಾರೆ. ಅಷ್ಟಕ್ಕೂ ಚೇತನ್ ಕುಮಾರ್ ಚಿತ್ರದಲ್ಲಿ ಭರ್ಜರಿ ಆ್ಯಕ್ಷನ್ ಇರುತ್ತದೆ. ಈ ಚಿತ್ರದಲ್ಲೂ ಅದು ಮುಂದುವರಿಯಲಿದೆ ಎಂಬ ನಿರೀಕ್ಷೆ ಇದೆ. ನಟ ಚೇತನ್ ಕುಮಾರ್ಗೆ ಹೆಸರು ತಂದುಕೊಟ್ಟಿದ್ದು ಬಹದ್ದೂರ್ ಸಿನಿಮಾ. ಆ ಚಿತ್ರದಲ್ಲಿ ನಟ ಧ್ರುವ ಸರ್ಜಾಗೆ ಆಕ್ಷನ್ ಕಟ್ ಹೇಳಿದ್ದರು. ಬಳಿಕ ಧ್ರುವ ಸರ್ಜಾ ಜೊತೆ ಭರ್ಜರಿ ಸಿನಿಮಾ ಮಾಡಿದರು. ಆ ಚಿತ್ರವೂ ಹಿಟ್ ಆಗಿತ್ತು. ಬಳಿಕ ಶ್ರೀಮುರಳಿ ಜತೆಗೆ ಭರಾಟೆ ಸಿನಿಮಾ ಮಾಡಿದರು.
ಬರ್ಮ ಚಿತ್ರ ಪ್ಯಾನ್ ಇಂಡಿಯಾ (Pan India) ಮಟ್ಟದಲ್ಲಿ ಮೂಡಿ ಬರಲು ಪ್ರಯತ್ನ ನಡೆದುತ್ತಿದೆ. ಈ ಹಿಂದೆ ಬಹದ್ದೂರ್, ಭರ್ಜರಿ ಮೂಲಕ ಮೋಡಿ ಮಾಡಿದ್ದ ಹರಿಕೃಷ್ಣ, ಬರ್ಮ ಚಿತ್ರದಲ್ಲೂ ಸಂಗೀತದ ಕೈಚಳಕ ತೋರಲಿದ್ದಾರೆ ಎನ್ನುವ ನಿರೀಕ್ಷೆ ಇದೆ. ಈ ಸಿನಿಮಾ ಘೋಷಣೆ ಆದ ದಿನವೇ ಚಿತ್ರದ ಆಡಿಯೋ ರೈಟ್ಸ್ ಸಹ ಮಾರಾಟವಾಗಿದೆ. ವಿ. ಹರಿಕೃಷ್ಣ ಅವರ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ಮೊದಲು ಚೇತನ್ ಹಾಗೂ ಹರಿಕೃಷ್ಣ ಅವರು ‘ಬಹದ್ದೂರ್’ ಹಾಗೂ ‘ಭರ್ಜರಿ’ ಚಿತ್ರದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದರು. ಈಗ ಮೂರನೇ ಬಾರಿಗೆ ಈ ಜೋಡಿ ಒಂದಾಗಿದೆ. ಮುಂದಿನ ತಿಂಗಳಿಂದ ಸಿನಿಮಾದ ಶೂಟಿಂಗ್ ಶುರುವಾಗಲಿದೆ.
ಕನ್ನಡ ಬರಿಯಲು ಕಲಿತಿದ್ದಾರೆ ಪೂಜಾ ಗಾಂಧಿ ಅಮ್ಮ: ನಟಿಯ ಪೋಸ್ಟ್ಗೆ ಭೇಷ್ ಭೇಷ್ ಅಂತಿರೋ ಕನ್ನಡಿಗರು