ಚಿನ್ನುಮರಿ ಚಂದನಾ ಅನಂತಕೃಷ್ಣ ಅವರ ಮದುವೆ ಸಂಬಂಧದಲ್ಲಿ ಮದುಮಗ ಪ್ರತ್ಯಕ್ಷ್​ ಅವರನ್ನು ಹೇಗೆ ರೆಡಿ ಮಾಡಲಾಗಿತ್ತು ಎನ್ನುವ ವಿಡಿಯೋ ವೈರಲ್​ ಆಗಿದೆ. 

ಚಿನ್ನುಮರಿ ಎಂದರೆ ಸಾಕು... ಸೀರಿಯಲ್​ ಪ್ರಿಯರ ಕಣ್ಮುಂದೆ ಬರುವುದು ಸೈಕೋ ಜಯಂತ್​ ಪತ್ನಿ ಜಾಹ್ನವಿ. ಗಂಡ ತನ್ನನ್ನು ಜೀವಕ್ಕಿಂತ ಹೆಚ್ಚಾಗಿ ಹುಚ್ಚನಂತೆ ಪ್ರೀತಿಸುತ್ತಾನೆ ಎಂದು ತಿಳಿದುಕೊಂಡಿರೋ ಜಾಹ್ನವಿಗೆ ಈಗ ತಾನೇ ತನ್ನ ಗಂಡನ ನಿಜವಾದ ಮುಖ ಗೊತ್ತಾಗುತ್ತಿದೆ. ತನ್ನನ್ನು ಪ್ರೀತಿಸಲು ಆತ ಯಾವ ಮಟ್ಟಿಗೆ ಇಳಿಯುತ್ತಿದ್ದಾನೆ ಎನ್ನುವ ವಿಷಯ ಈಗಷ್ಟೇ ಈ ಪೆದ್ದು ಪತ್ನಿಗೆ ಗೊತ್ತಾಗುತ್ತಿದೆ. ತಾನು ಊಟ ಕೊಟ್ಟೆ ಎನ್ನುವ ಕಾರಣಕ್ಕೆ ಸೆಕ್ಯುರಿಟಿ ಗಾರ್ಡ್​ ಅನ್ನು ಥಳಿಸಿರುವುದರಿಂದ ಹಿಡಿದು, ತನ್ನ ಪ್ರೀತಿಯ ಮೊಲವನ್ನು ಬಿಟ್ಟು ಬಂದಿದ್ದು ಅಷ್ಟೇ ಅಲ್ಲದೇ ತಮ್ಮ ಸ್ವಂತ ಮನೆಯವರ ಮೇಲೂ ಕಾಳಜಿ ಮಾಡಿದರೆ ಗಂಡನಿಗೆ ವಿಪರೀತ ಕೋಪ ಬರುತ್ತದೆ ಎಂಬೆಲ್ಲಾ ವಿಷಯ ಈಗ ಅರಿವಿಗೆ ಬರುತ್ತಿದೆ. ಸೀರಿಯಲ್​ ಟ್ವಿಸ್ಟ್​ ಪಡೆದುಕೊಳ್ಳುತ್ತಿರುವ ನಡುವೆಯೇ ನಿಜ ಜೀವನದಲ್ಲಿಯೂ ಹಸೆಮಣೆ ಏರಿದ್ದಾಳೆ ಚಿನ್ನುಮರಿ. ಈ ಚಿನ್ನುಮರಿಯ ರಿಯಲ್​ ಹೆಸರು ಚಂದನಾ ಅನಂತಕೃಷ್ಣ. ನಿನ್ನೆ ಇವರ ಮದುವೆ ಅದ್ಧೂರಿಯಾಗಿ ನಡೆದಿದೆ. ಉದ್ಯಮಿ ಆಗಿರುವ ಪ್ರತ್ಯಕ್ಷ್ ಅವರ ಜೊತೆ ಚಂದನಾ ಮದುವೆ ನಡೆದಿದ್ದು ಕಿರುತೆರೆ ಕಲಾವಿದರು ಸೇರಿದಂತೆ ಹಲವರು ಮದುವೆಗೆ ಬಂದು ಶುಭ ಹಾರೈಸಿದ್ದಾರೆ.

ಮದುವೆಗೆ ಸಂಬಂಧಿಸಿದ ಹಲವಾರು ವಿಡಿಯೋಗಳು ಈಗ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆಗುತ್ತಿವೆ. ಮದುವೆಯ ಜತೆಗೆ ಪ್ರೀ ವೆಡ್ಡಿಂಗ್‌ ಫೋಟೋಶೂಟ್‌ನಲ್ಲಿಯೂ ಚಂದನಾ ಅನಂತಕೃಷ್ಣ ಮತ್ತು ಪ್ರತ್ಯಕ್ಷ್‌ ಮಿಂಚಿದ್ದರು. ಲಾಲ್‌ಬಾಗ್‌, ಮಲ್ಲೇಶ್ವರ ಸೇರಿ ಹಲವೆಡೆ ಪಲ್ಲವಿ ಅನುಪಲ್ಲವಿ ಸಿನಿಮಾದ ನಗುವ ನಯನ ಮಧುರ ಮೌನ ಹಾಡಿಗೆ ಹೆಜ್ಜೆ ಹಾಕಿದ್ದರು. ಇದೀಗ ಇನ್ನೊಂದು ವೈರಲ್​ ವಿಡಿಯೋದಲ್ಲಿ, ಉದ್ಯಮಿ ಪ್ರತ್ಯಕ್ಷ್ ಅವರನ್ನು ಮದುಮಗನನ್ನಾಗಿ ಹೇಗೆ ಅಲಂಕಾರ ಮಾಡಿದ್ದರು ಎನ್ನುವ ವಿಡಿಯೋ ಅನ್ನು ಬಸವರಾಜ ಹುಬ್ಬಳ್ಳಿ ಎನ್ನುವವರು ಶೇರ್​ ಮಾಡಿಕೊಂಡಿದ್ದಾರೆ. ಇದರಲ್ಲಿ ಪ್ರತ್ಯಕ್ಷ್​ ಅವರಿಗೆ ಮದುಮನ ಟಚ್​ ಅಪ್​ ಕೊಟ್ಟಿರುವುದನ್ನು ನೋಡಬಹುದಾಗಿದೆ. ಅಂದಹಾಗೆ, ಪ್ರತ್ಯಕ್ಷ್​ ಅವರು, ನಟ, ದಿವಂಗತ ಉದಯ್ ಹುತ್ತಿನಗದ್ದೆ ಹಾಗೂ ಲಲಿತಾಂಜಲಿ ಉದಯ್ ಅವರ ಪುತ್ರ. 

ಹೆಂಡತಿ- ಅಸ್ಟ್ರಾಲಾಜಿ ಇಬ್ರಲ್ಲಿ ಹೆಚ್ಚು ಪ್ರೀತಿಸೋದು ಯಾರನ್ನು ಅಂತ ಕೇಳಿದ್ರೆ ಹೀಗೆ ಹೇಳೋದಾ ಗುರೂಜಿ?

ಇನ್ನು ಚಂದನಾ ಅವರು ಮದುವೆಯಾಗುತ್ತಿರುವ ಪ್ರತ್ಯಕ್ಷ್​ ಅವರು ಉದ್ಯಮಿಯಾಗಿದ್ದು, ಚಿತ್ರನಟ ದಿವಂಗತ ಉದಯ್ ಹುತ್ತಿನಗದ್ದೆ - ನಟಿ ಲಲಿತಾಂಜಲಿ ದಂಪತಿಯ ಮಗನಾಗಿದ್ದಾರೆ. ನಟಿ ಚಂದನಾ ಅವರು ಚಿನ್ನುಮರಿ ಆಗುವ ಮುನ್ನ, ರಾಜಾ ರಾಣಿ ಸೀರಿಯಲ್‌ನಲ್ಲಿ ನಟಿಸಿದ್ದರು. ಆದರೆ ಇವರ ಫೇಮಸ್​ ಆಗಿದ್ದು, ಬಿಗ್ ಬಾಸ್ ಮನೆಗೆ ಹೋಗಿ ಬಂದ ಮೇಲೆ. ಬಿಗ್ ಬಾಸ್ ಕನ್ನಡ 7 ಹಾಗೂ 'ಭರ್ಜರಿ ಬ್ಯಾಚುಲರ್ಸ್' ಕಾರ್ಯಕ್ರಮಗಳಲ್ಲಿ ಇವರು ಸ್ಪರ್ಧಿಸಿದ್ದರು. ಹೂಮಳೆ ಸೀರಿಯಲ್‌ನಲ್ಲಿ ಕಾಣಿಸಿಕೊಂಡಿದ್ದ ನಟಿ ಚಂದನಾ ಅನಂತಕೃಷ್ಣ ಇದೀಗ ಲಕ್ಷ್ಮೀ ನಿವಾಸ ಸೀರಿಯಲ್‌ ಮೂಲಕ ಜನಪ್ರಿಯತೆ ಗಳಿಸುತ್ತಿದ್ದಾರೆ.

ಇನ್ನು ಪ್ರತ್ಯಕ್ಷ್​ ಕುರಿತು ಹೇಳುವುದಾದರೆ, ಮೂಲತಃ ಚಿಕ್ಕಮಗಳೂರಿನವರು. ಇವರ ತಂದೆ ಉಯದ್​ ಅವರು, ಕೆಲ ವರ್ಷ ಹಲವು ಚಿತ್ರಗಳಲ್ಲಿ ನಟಿಸಿದರು. 1987ರಲ್ಲಿ ತೆರೆ ಕಂಡಿದ್ದ ಆರಂಭ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಪದಾರ್ಪಣೆ ಮಾಡಿದ್ದವರು. ಅಗ್ನಿಪರ್ವ , ಶುಭ ಮಿಲನ , ಜಯಭೇರಿ , ಉದ್ಭವ , ಅಮೃತ ಬಿಂದು , ಶಿವಯೋಗಿ ಅಕ್ಕಮಹಾದೇವಿ , ಉಂಡು ಹೋದ ಕೊಂಡು ಹೋದ , ಕ್ರಮ ಮುಂತಾದ ಚಿತ್ರಗಳಲ್ಲಿ ಇವರು ಬಣ್ಣ ಹಚ್ಚಿದ್ದಾರೆ. ಬಳಿಕ ಅವರು, ಪೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮುಂದುವರೆಸಿದರು. ಚಿಕ್ಕಮಗಳೂರಿನಲ್ಲಿ ಕಾಫಿ ಎಸ್ಟೇಟ್ ಹೊಂದಿದ್ದಾರೆ. 2022ರಲ್ಲಿ ಅವರು ನಿಧನರಾಗಿದ್ದು, ಪ್ರತ್ಯಕ್ಷ್​ ಅವರೂ ಕಾಫಿ ಎಸ್ಟೇಟ್​ ನೋಡಿಕೊಳ್ಳುತ್ತಿದ್ದಾರೆ ಎನ್ನಲಾಗುತ್ತಿದೆ.

ಐಶ್ವರ್ಯ- ಅಭಿಷೇಕ್​ ಕಲಹಕ್ಕೆ ಇದೇ ಕಾರಣನಾ? ಕಂಗನಾ ಕಂಡ್ರೆ ಆಗದವರೂ ಈ ಮಾತನ್ನು ಒಪ್ತಿರೋದ್ಯಾಕೆ?

View post on Instagram