ಫ್ರೆಂಡ್​ಷಿಪ್ ಡೇ​ಗೆ ಸೀತಾರಾಮ್​ ಟೀಮ್​ ಫನ್ನಿ ರೀಲ್ಸ್​ ಮಾಡಿದ್ದು, ವೈಷ್ಣವಿ ಗೌಡ ಅದನ್ನು ಶೇರ್​ ಮಾಡಿದ್ದಾರೆ. ಆದರೆ ಇಲ್ಲಿ ಅಶೋಕ್​ ಕಾಣಿಸ್ತಿಲ್ಲ ಎನ್ನೋ ಚಿಂತೆ ಅಭಿಮಾನಿಗಳಿಗೆ!  

ಸೀತಾ ರಾಮ ಕಲ್ಯಾಣ ನಿರ್ವಿಘ್ನವಾಗಿ ನೆರವೇರಿದ್ದು, ಸೀತಾ ಮತ್ತು ರಾಮ ಇಬ್ಬರೂ ಮದುವೆಯನ್ನು ಎಂಜಾಯ್​ ಮಾಡುತ್ತಿದ್ದಾರೆ. ಇದೇ ಸಮಯದಲ್ಲಿ ಸೀತಾ ಪಾತ್ರಧಾರಿ ವೈಷ್ಣವಿ ಗೌಡ ಅವರು ತಮ್ಮ ಸೋಷಿಯಲ್​ ಮೀಡಿಯಾದಲ್ಲಿಯೂ ಸಕತ್​ ಆ್ಯಕ್ಟೀವ್​ ಆಗಿದ್ದಾರೆ. ಸೋಷಿಯಲ್​ ಮೀಡಿಯಾಗಳಲ್ಲಿ ಹಲವಾರು ವಿಡಿಯೋ ಶೇರ್​ ಮಾಡುತ್ತಾರೆ. ಟೈಂ ಸಿಕ್ಕಾಗಲೆಲ್ಲಾ ಸೀತಾರಾಮ ಟೀಂನ ಪಾತ್ರಧಾರಿಗಳ ಜೊತೆ ಎಂಜಾಯ್​ ಮಾಡುತ್ತಾರೆ. ಬಿಜಿ ಷೆಡ್ಯೂಲ್​ ನಡುವೆ ಒಂದಿಷ್ಟು ರಿಲ್ಯಾಕ್ಸ್​ ಮೂಡಿಗೆ ಬರುತ್ತದೆ ಟೀಮ್​. ಅದರಲ್ಲಿಯೂ ವೈಷ್ಣವಿ ಗೌಡ ಅವರು ಸೋಷಿಯಲ್​ ಮೀಡಿಯಾದಲ್ಲಿ ದಿನಕ್ಕೊಂದರಂತೆ ರೀಲ್ಸ್​ ಮಾಡುತ್ತಾ, ಕೆಲವೊಂದು ಟಿಪ್ಸ್​ ಹೇಳುತ್ತಾ ಆ್ಯಕ್ಟೀವ್​ ಆಗಿರುತ್ತಾರೆ. ಈಗ ಅವರೇ ಫ್ರೆಂಡ್​ಷಿಪ್​ ಡೇ ನೆಪದಲ್ಲಿ ಒಂದು ರೀಲ್ಸ್​ ಮಾಡಿದ್ದು, ಅಭಿಮಾನಿಗಳು ಅದನ್ನು ಸಕತ್​ ಇಷ್ಟಪಟ್ಟಿದ್ದಾರೆ.

ತಮಿಳಿನ ಥಿಂಕ್​ ಇಂಡೆ ಚಿತ್ರದ ಕಾಠು ಮೇಲಾ ಹಾಡಿಗೆ ಸೀತಾ-ರಾಮ, ಪ್ರಿಯಾ ಹಾಗೂ ಅಶೋಕನ ತಂಗಿ ಅಂಜಲಿ ಅವರು ರೀಲ್ಸ್​ ಮಾಡಿದ್ದಾರೆ. ನಿನ್ನೆ ಅಂದರೆ ಭಾನುವಾರ ಆಗಸ್ಟ್​ 4ರಂದು ಸ್ನೇಹಿತರ ದಿನದ ಅಂಗವಾಗಿ ಈ ರೀಲ್ಸ್​ ಮಾಡಲಾಗಿದ್ದು, ಇದಕ್ಕೆ ಥಹರೇವಾರಿ ಕಮೆಂಟ್ಸ್​ ಸುರಿಮಳೆಯಾಗುತ್ತಿದೆ. ಆದರೆ ಇಲ್ಲಿ ಪ್ರಿಯಾ ಇದ್ದರೂ ಪ್ರಿಯಾಳ ಗಂಡ ಅಶೋಕ್​ ಇಲ್ಲದೇ ಇರುವುದಕ್ಕೆ ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಅಶೋಕ್​ ಪಾತ್ರವನ್ನು ಸೀತಾರಾಮ ಸೀರಿಯಲ್​ ಪ್ರೇಮಿಗಳು ಬಹಳ ಇಷ್ಟಪಟ್ಟಿದ್ದು, ಅವರೆಲ್ಲಿ ಎಂದು ಕೇಳುತ್ತಿದ್ದಾರೆ. ಏಕೆಂದರೆ ಸೀತಾ-ರಾಮ ಜೋಡಿಯಂತೆಯೇ ಈ ಸೀರಿಯಲ್​ನಲ್ಲಿ ಫೇಮಸ್​ ಆಗಿರುವುದು ಅಶೋಕ್​-ಪ್ರಿಯಾ ಜೋಡಿ. ಅಶೋಕ್​ ಬದಲು ಅಶೋಕ್​ ತಂಗಿ ಅಂಜಲಿ ಕಾಣಿಸಿಕೊಂಡಿರುವುದಕ್ಕೆ ನೆಟ್ಟಿಗರು ಪ್ರಶ್ನೆ ಮಾಡುತ್ತಿದ್ದಾರೆ. 

ಒಳಗಡೆ ಷರ್ಟ್​ ಇದ್ಯಾ ನಮ್ಗೆ ಕಾಣಿಸ್ಲೇ ಇಲ್ಲ! ಸೀತಾರಾಮ ಸೀತಾಳ ಹೀಗೆ ಕಾಲೆಳೆಯೋದಾ ಟ್ರೋಲಿಗರು?

ಇನ್ನು ಸೀತಾ ಪಾತ್ರಧಾರಿ ಹೆಸರು ವೈಷ್ಣವಿ ಗೌಡ ಆದರೆ, ರಾಮ್​ ಪಾತ್ರಧಾರಿ ಗಗನ್​ ಚಿನ್ನಪ್ಪ. ಪ್ರಿಯಾ ಪಾತ್ರಧಾರಿಯ ಹೆಸರು ಮೇಘನಾ ಶಂಕರಪ್ಪ ಆದ್ರೆ, ಅಂಜಲಿ ಪಾತ್ರಧಾರಿಯಾದವರು ಅನುಷಾ ಪರಮೇಶ್ವರಪ್ಪ. ವೈಷ್ಣವಿ ಅವರ ಕುರಿತು ಹೇಳುವುದಾದರೆ, ಕನ್ನಡದ ಪ್ರೇಕ್ಷಕರಿಗೆ ಸನ್ನಿಧಿಯಂತಲೇ ಇವರು ಪರಿಚಯವಿದ್ದರು. ಅಗ್ನಿಸಾಕ್ಷಿ ಸೀರಿಯಲ್​ನ ಸನ್ನಿಧಿ ಮೂಲಕ ಸಕತ್​ ಫೇಮಸ್​ ಆಗಿದ್ದ ನಟಿ ಈಗ ಸೀತಾರಾಮದ ಸೀತೆಯಾಗಿ ಮನೆ ಮಾತಾಗಿದ್ದಾರೆ. ವೈಷ್ಣವಿ ಕನ್ನಡ ಕಿರುತೆರೆಲೋಕದ ಜನಪ್ರಿಯ ನಟಿ. ಅಷ್ಟೇ ಅಲ್ಲದೇ, ಹಲವು ಉತ್ಪನ್ನಗಳ ರಾಯಭಾರಿಯೂ ಹೌದು. ಜೀ ಕನ್ನಡದ `ದೇವಿ' ಸೀರಿಯಲ್‌ನಿಂದ ಇವರ ಕಿರುತೆರೆ ಪಯಣ ಆರಂಭವಾಯಿತು.ನಂತರ `ಪುನರ್‌ವಿವಾಹ'ದಲ್ಲಿ ನಟಿಸಿ `ಅಗ್ನಸಾಕ್ಷಿ' ಸೀರಿಯಲ್‌ನ ಸನ್ನಿಧಿಯಾಗಿ ಆಯ್ಕೆಗೊಂಡರು. ಈ ಪಾತ್ರದ ಮೂಲಕ ಅಪಾರ ಜನಮನ್ನಣೆ ಪಡೆದಿದ್ದಾರೆ. `ಗಿರಿಗಿಟ್ಲೆ' ಚಿತ್ರದ ಮೂಲಕ ನಾಯಕಿಯಾಗಿದ್ದಾರೆ. `ಭರ್ಜರಿ ಕಾಮಿಡಿ' ಎಂಬ ರಿಯಾಲಿಟಿ ಷೋ ನಿರೂಪಣೆ ಕೂಡ ಮಾಡಿದ್ದಾರೆ. `ಕುಣಿಯೋಣ ಬಾರ' ಡ್ಯಾನ್ಸ್ ರಿಯಾಲಿಟಿ ಷೋ ಆಗೂ ಬಿಗ್​ಬಾಸ್​ ಸೀಸನ್​ 8ನಲ್ಲಿ ಭಾಗವಹಿಸಿದ್ದಾರೆ.

ಇನ್ನು ರಾಮ್​ ಪಾತ್ರಧಾರಿ ಗಗನ್​ ಚಿನ್ನಪ್ಪ ಕುರಿತು ಹೇಳುವುದಾದರೆ, ಕೊಡಗು ಮೂಲದ ಗಗನ್​, ಬಣ್ಣ ಲೋಕಕ್ಕೆ ಎಂಟ್ರಿ ಕೊಡುವ ಮೊದಲದು ಎರಡು ವರ್ಷ ಓಮನ್‌ ದೇಶದಲ್ಲಿ ಅದಾದ ಬಳಿಕ ಒಂದು ವರ್ಷ ಅಬುದಾಬಿಯಲ್ಲಿ ಕೆಲಸ ಮಾಡಿದ್ದರು. ಶಿಕ್ಷಣ ಮುಗಿಸಿದ ಬಳಿಕ ಕೆಲಸಕ್ಕೆ ಸೇರಿದ್ದವರು. ವಿದೇಶಗಳಲ್ಲಿ ಕೆಲಸ ಮಾಡಿದ ಸಂದರ್ಭದಲ್ಲಿ ಅವರ ಒಂದು ಫೋಟೋಶೂಟ್​ ಅವರನ್ನು ಬಣ್ಣದ ಲೋಕಕ್ಕೆ ಬರುವಂತೆ ಮಾಡಿತು. 2014 ರಲ್ಲಿ ಫೋಟೋಶೂಟ್​ ಮಾಡಿಸಿ ಸೋಷಿಯಲ್​ ಮೀಡಿಯಾದಲ್ಲಿ ಹಾಕಿದ್ದರು. ಆಗ ಅವರಿಗೆ ಚಿತ್ರವೊಂದಕ್ಕೆ ಆಫರ್​ ಬಂದಿತ್ತು. ಮಂಗಳಗೌರಿ ಮದುವೆ ಸೀರಿಯಲ್‌ನಲ್ಲಿ ಅವಕಾಶ ಸಿಕ್ಕಿತು. ಈ ಧಾರಾವಾಹಿಯಲ್ಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮಿನಿ ಬಿಗ್ ಬಾಸ್​ಗೂ ಎಂಟ್ರಿ ಕೊಟ್ಟು ಈಗ ಸೀತಾರಾಮ ಸೀರಿಯಲ್​ ಮೂಲಕ ಕನ್ನಡ ಧಾರಾವಾಹಿ ಲೋಕದಲ್ಲಿ ಪೂರ್ಣಪ್ರಮಾಣದ ನಾಯಕರಾಗಿ ಮಿಂಚುತ್ತಿದ್ದಾರೆ. ತೆಲುಗು ಕಿರುತೆರೆಗೂ ಕಾಲಿಟ್ಟಿರೋ ಗಗನ್​ ಅವರು, ‘ಕೃಷ್ಣ ಮುಕುಂದ ಮುರಾರಿ’ ಸೀರಿಯಲ್​ನಲ್ಲಿ ನಟಿಸುತ್ತಿದ್ದಾರೆ. ಇದರಲ್ಲಿ ಅವವರು ಮುರಾರಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಪ್ರೇರಣಾ ಕಂಬಮ್, ಯಶ್ಮಿ ಗೌಡ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಹಿಟ್ಲರ್​ ಕಲ್ಯಾಣದ ಅಂತರಾ ಪಾತ್ರಧಾರಿ ರಜನಿ WANTED! ಅಭಿಮಾನಿಗಳಿಗೆ ಶಾಕ್​ ಕೊಟ್ಟ ನಟಿ

View post on Instagram