Asianet Suvarna News Asianet Suvarna News

ಹೊಸ ಧಾರಾವಾಹಿ 'ಯಾರಿವಳು'; ಕಿರುತೆರೆಗೆ ಬಂದ ವೆನಿಲ್ಲಾ ಚಿತ್ರದ ನಾಯಕಿ ಸ್ವಾತಿ!

ಕಿರುತೆರೆ ಪ್ರೇಕ್ಷಕರನ್ನು ರಂಜಿಸಲು ಮತ್ತೊಂದು ಹೊಸ ಧಾರಾವಾಹಿಯನ್ನು ಹೊತ್ತು ತರುತ್ತಿದೆ ಉದಯ ವಾಹಿನಿ. ‘ಯಾರಿವಳು’ ಎಂಬುದು ಧಾರಾವಾಹಿಯ ಹೆಸರು.

udaya tv news serial yarivalu swathi konde
Author
Bangalore, First Published Aug 31, 2020, 9:47 AM IST

ಆಗಸ್ಟ್‌ 31ರಿಂದ ಪ್ರತಿ ಸೊಮವಾರದಿಂದ ಶುಕ್ರವಾರದ ವರೆಗೆ ರಾತ್ರಿ 8 ಗಂಟೆಗೆ ಈ ಧಾರಾವಾಹಿ ಪ್ರಸಾರ ಆಗಲಿದೆ. ಶ್ರೀಮಂತ ಮನೆತನಕ್ಕೆ ಸೇರಿದ ಮಗು, ಹೆತ್ತವರ ಪ್ರೀತಿಯಿಂದ ವಂಚಿತರಾಗಿರುತ್ತಾರೆ. ಇದರ ಜತೆಗೆ ಆಸ್ತಿ ಗಲಾಟೆ, ಈ ಮಗುವಿಗೆ ಬೆನ್ನೆಲುಬಾಗಿ ನಿಲ್ಲುವ ಮಂಗಳಮುಖಿ ಇವರ ಸುತ್ತ ಕತೆ ಸಾಗುತ್ತದೆ.

ಉದಯ ವಾಹಿನಿಯಲ್ಲಿ ಕಾವ್ಯಾಂಜಲಿ! 

ಹೊಸ ರೀತಿಯ ತಿರುವುಗಳಿಂದ ಕೂಡಿದ ಈ ಧಾವಾರಾಹಿ ನಾಯಕಿ ಮಾಯಾ, ಅಂಜನೇಯನ ಪರಮ ಭಕ್ತೆ ಎಂಬುದು ಮತ್ತೊಂದು ಹೈಲೈಟ್‌. ಆರ್ಕಾ ಮಿಡಿಯಾ ಈ ಧಾವಾಹಿಯನ್ನು ನಿರ್ಮಿಸುತ್ತಿದ್ದು, ದರ್ಶಿತ್‌ ಭಟ್‌ ನಿರ್ದೇಶನ ಮಾಡುತ್ತಿದ್ದಾರೆ. ಮಂಡ್ಯ ಮಂಜು ಕ್ಯಾಮೆರಾ ಇದೆ.

 

‘ಬ್ಯೂಟಿಫುಲ್‌ ಮನಸುಗಳು’, ‘ಕಮರೊಟ್ಟು ಚೆಕ್‌ಪೋಸ್ಟ್‌’, ‘ವೆನಿಲ್ಲಾ’, ‘ಕಟ್ಟುಕಥೆ’ ಮುಂತಾದ ಚಿತ್ರದಲ್ಲಿ ನಟಿಸಿದ್ದ ಸ್ವಾತಿ ಕೊಂಡೆ ಈ ಧಾರಾವಾಹಿಯಲ್ಲಿ ನಾಯಕಿ ಪಾತ್ರ ಮಾಡುತ್ತಿದ್ದಾರೆ. ಉಳಿದಂತೆ ಆರವ್‌ ಸೂರ್ಯ, ಅಂಬರೀಶ್‌ ಸಾರಂಗಿ, ಅಶೋಕ ಹೆಗಡೆ, ಬಾಲರಾಜ್‌, ವಾಣಿಶ್ರೀ, ದೀಪಾ ಪಾರ್ವತಿ, ನಾಗರಾಜ್‌ ಭಟ್‌, ಮಂಗಳಮುಖಿ ಪಾತ್ರಧಾರಿಗಳಾಗಿ ಸನಾ ಸುಮನ್‌ ಹಾಗೂ ಲೋಹಿತ್‌ ಪಟೇಲ್‌ ಮುಂತಾದವರು ನಟಿಸುತ್ತಿದ್ದಾರೆ.

Follow Us:
Download App:
  • android
  • ios