Asianet Suvarna News Asianet Suvarna News

ಬಂದ್ ಮಾಡಿ ಬಕ್ವಾಸ್; ಮುಷ್ಕರ ನಿರತ ವೈದ್ಯರಿಗೆ ಅಜ್ಜ ಫುಲ್ ಕ್ಲಾಸ್!

ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಿ, ರಾಜ್ಯದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಬಹುತೇಕ ಖಾಸಗಿ ಆಸ್ಪತ್ರೆಗಳು ಹೊರರೋಗಿ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿವೆ. ಇವುಗಳ ನಡುವೆ ಮಿಂಟೋ ಆಸ್ಪತ್ರೆಯಲ್ಲಿ ಮುಷ್ಕರ ನಡೆಸುತ್ತಿದ್ದ ವೈದ್ಯರಿಗೆ ವೃದ್ಧರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.  

ಬೆಂಗಳೂರು (ನ.08): ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಿ, ರಾಜ್ಯದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ.

ಬಹುತೇಕ ಖಾಸಗಿ ಆಸ್ಪತ್ರೆಗಳು ಹೊರರೋಗಿ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿವೆ. ಇವುಗಳ ನಡುವೆ ಮಿಂಟೋ ಆಸ್ಪತ್ರೆಯಲ್ಲಿ ಮುಷ್ಕರ ನಡೆಸುತ್ತಿದ್ದ ವೈದ್ಯರಿಗೆ ವೃದ್ಧರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.  

ಇನ್ನೊಂದು ಕಡೆ ವೈದ್ಯರ ಕೆಂಗಣ್ಣಿಗೆ ಗುರಿಯಾಗಿರುವ ನಟಿ ಹಾಗೂ ವೇದಿಕೆ ಕನ್ನಡ ರಕ್ಷಣಾ ಕಾರ್ಯಕರ್ತೆ ಅಶ್ವಿನಿ ಗೌಡ ಸೇರಿ ಹಲವರು ಪೊಲೀಸರಿಗೆ ಶರಣಾಗಿದ್ದಾರೆ. ಆದರೆ, ಮುಷ್ಕರವಿನ್ನೂ ಮುಂದುವರಿದಿದೆ.