Asianet Suvarna News Asianet Suvarna News

ಬೆಂಗಳೂರು ಕೃಷಿ ಮೇಳದಲ್ಲಿ ದಾಂಧಲೆ; ಸ್ಥಳೀಯ ಯುವಕರ ಮೇಲೆ ಮಾರಣಾಂತಿಕ ಹಲ್ಲೆ!

ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK)ದಲ್ಲಿ ನಡೆಯುತ್ತಿದ್ದ ಕೃಷಿ ಮೇಳದಲ್ಲಿ ಕನ್ನಡಿಗ ಯುವಕರ ಮೇಲೆ  ಹಲ್ಲೆ ನಡೆದಿದೆ. ಉತ್ತರ ಭಾರತ ಮೂಲದ 40ಕ್ಕೂ ಹೆಚ್ಚು ಯುವಕರ ತಂಡ ಈ ಕೃತ್ಯವೆಸಗಿದ್ದು, ಹಣ-ಚಿನ್ನ ಕಸಿದು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬೆಂಗಳೂರು (ಅ.28): ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರ (GKVK)ದಲ್ಲಿ ನಡೆಯುತ್ತಿದ್ದ ಕೃಷಿ ಮೇಳದಲ್ಲಿ ಕನ್ನಡಿಗ ಯುವಕರ ಮೇಲೆ ಹಲ್ಲೆ ನಡೆದಿದೆ.

ಉತ್ತರ ಭಾರತ ಮೂಲದ 40ಕ್ಕೂ ಹೆಚ್ಚು ಯುವಕರ ತಂಡ ಈ ಕೃತ್ಯವೆಸಗಿದ್ದು, ಹಣ-ಚಿನ್ನ ಕಸಿದು ಪರಾರಿಯಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಪೊಲೀಸರು ಪ್ರಕರಣ ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.  ಯಾವ ಕಾರಣಕ್ಕೆ ಗಲಾಟೆ ಶುರುವಾಯ್ತು, ಅಲ್ಲೇನು ನಡೀತು ಎಂಬ ಬಗ್ಗೆ ಸ್ಪಷ್ಟತೆಯಿಲ್ಲ. ಪೊಲೀಸರು ಸಿಸಿಟಿವಿ ದೃಶ್ಯಾವಳಿ ಮತ್ತು ಮೊಬೈಲ್ ರೆಕಾರ್ಡಿಂಗ್ ಗಳನ್ನು ಕಲೆ ಹಾಕಿ ತನಿಖೆ ನಡೆಸುತ್ತಿದ್ದಾರೆ.

Video Top Stories