Asianet Suvarna News Asianet Suvarna News

ಬೊಮ್ಮಾಯಿ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕಕ್ಕೆ ಸಿಕ್ಕಿದ್ದೇನು?

ಕರಾವಳಿ ಕರ್ನಾಟಕದ ಭಾಗದ ಜನರ ಬೇಡಿಕೆಗಳ ಪೈಕಿ ಮೀನುಗಾರಿ ಹಾಗೂ ಅದಕ್ಕೆ ಸಂಬಂಧಿಸಿ ಸಮಸ್ಯೆಗಳಿಗೆ ಈ ಬಾರಿಯ ಬಜೆಟ್ ಉತ್ತರ ಕಂಡುಕೊಳ್ಳುವ ಪ್ರಯತ್ನ ಮಾಡಿದೆ. ಆದರೆ ಬಿಲ್ಲವ ಹಾಗೂ ಬಂಟರ ಬೇಡಿಕೆ ಈಡೇರಿಲ್ಲ. ಕರಾವಳಿ ಕರ್ನಾಟಕಕ್ಕೆ ಬಜೆಟ್‌ನಲ್ಲಿ ನೀಡಿರುವ ಅನುದಾನವೇನು?

ಬಸವರಾಜ್ ಮಂಡಿಸಿದ ಬಜೆಟ್‌ನಲ್ಲಿ ಕರಾವಳಿ ಕರ್ನಾಟಕಕ್ಕೆ ಸಿಕ್ಕಿದ್ದೇನು? ಮೀನುಗಾರರ ಡೀಸೆಲ್ ಸಬ್ಸಿಡಿ 2 ಲಕ್ಷ ಲೀಟರ್‌ಗೆ ಏರಿಕೆ ಮಾಡಲಾಗಿದೆ. 12ಸಾವಿರಕ್ಕೂ ಹೆಚ್ಚು ಮೀನುಗಾರರಿಗೆ ಕಿಸಾನ ಕ್ರೆಡಿಟ್, ಮನೆ ನಿರ್ಮಾಣ, ಕುಮಟಾದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಮತ್ಸಸಿರಿ ಆಳಸಮುದ್ರ ಮೀನುಗಾರಿಕೆ ಸೇರಿದಂತೆ ಕರಾವಳಿ ಕರ್ನಾಟಕದಕ್ಕೆ ಬಜೆಟ್‌ನಲ್ಲಿ ಬೊಮ್ಮಾಯಿ ನೀಡಿರುವ ಕೊಡುಗೆ ಹಾಗೂ ಅನುದಾನದ ಸಂಪೂರ್ಣ ವಿವರ ಇಲ್ಲಿದೆ.
 

Video Top Stories