Asianet Suvarna News Asianet Suvarna News

ಒಂಟಿ ಸಲಗದ ದಾಳಿಯಿಂದ ಬೈಕ್ ಸವಾರ ಜಸ್ಟ್ ಮಿಸ್

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿರುವ ಘಟನೆ ಚಾಮರಾಜನಗರದ ತಲಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ.

ಕಾಡಾನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಬೈಕ್ ಸವಾರ ಪಾರಾಗಿರುವ ಘಟನೆ ಚಾಮರಾಜನಗರ-ತಮಿಳುನಾಡು ಗಡಿಯ ತಾಳವಾಡಿಯ ತಲಮಲೈ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಆನೆಯನ್ನು ಕಂಡು ಕಕ್ಕಾಬಿಕ್ಕಿಯಾದ ಬೈಕ್ ಸವಾರ ಬೈಕ್ ಬಿಟ್ಟು ಕೆಳಗೆ ಬಿದ್ದಿದ್ದು,ಆನೆ ಹತ್ತಿರಕ್ಕೆ ಬರುತ್ತಿದ್ದಂತೆ ಓಡಿ ಹೋಗಿದ್ದಾನೆ.ಅದೃಷ್ಟವಶಾತ್ ಪ್ರಾಣಾಪಾಯದಿಂದ ಸವಾರ ಪಾರಾಗಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಇನ್ನು ಈ ದೃಶ್ಯವನ್ನು  ಎದುರುಗಡೆಯಿಂದ ಬರುತ್ತಿದ್ದ ಪ್ರಯಾಣಿಕರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

Video Top Stories