Asianet Suvarna News Asianet Suvarna News

Kangana Ranaut: ಸೌತ್ ಸೂಪರ್‌ ಸ್ಟಾರ್ಸ್‌ಗೆ ಬಾಲಿವುಡ್‌ನಿಂದ ದೂರವಿರಿ ಎಂದಿದ್ದೇಕೆ ಬಾಲಿವುಡ್ ಕ್ವೀನ್?

ಬಾಲಿವುಡ್ ನಟಿ ಕಂಗನಾ ರಣಾವತ್ ಆಗಾಗ ತಮ್ಮ ಹೇಳಿಕೆಯಿಂದ ಸುದ್ದಿಯಾಗುತ್ತಾರೆ. ಇದೀಗ ದಕ್ಷಿಣ ಭಾರತದ ನಟರಾದ ಯಶ್ ಮತ್ತುಅಲ್ಲು ಅರ್ಜುನ್‌ರನ್ನು ಕಂಗನಾ ಹಾಡಿ ಹೊಗಳಿದ್ದಾರೆ. ಅವರಿಬ್ಬರ 'ಕೆಜಿಎಫ್​' ಮತ್ತು 'ಪುಷ್ಪ' ಚಿತ್ರದ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ.

ಬಾಲಿವುಡ್ (Bollywood) ನಟಿ ಕಂಗನಾ ರಣಾವತ್ (Kangana Ranaut) ಆಗಾಗ ತಮ್ಮ ಹೇಳಿಕೆಯಿಂದ ಸುದ್ದಿಯಾಗುತ್ತಾರೆ. ಇದೀಗ ದಕ್ಷಿಣ ಭಾರತದ ನಟರಾದ ಯಶ್ (Yash)​ ಮತ್ತು ಅಲ್ಲು ಅರ್ಜುನ್‌ರನ್ನು (Allu Arjun) ಕಂಗನಾ ಹಾಡಿ ಹೊಗಳಿದ್ದಾರೆ. ಅವರಿಬ್ಬರ 'ಕೆಜಿಎಫ್​' (KGF) ಮತ್ತು 'ಪುಷ್ಪ' (Pushpa) ಚಿತ್ರದ ಫೋಟೋಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ (Instagram Story) ಶೇರ್​ ಮಾಡಿಕೊಂಡಿರುವ ನಟಿ, ದಕ್ಷಿಣ ಚಲನಚಿತ್ರಗಳ ಯಶಸ್ಸು ಮತ್ತು ರಾಷ್ಟ್ರದಾದ್ಯಂತ ಅಲ್ಲಿನ ನಟರ ಜನಪ್ರಿಯತೆ ಹೆಚ್ಚಾಗಲು ಮೂರು ಕಾರಣವನ್ನು ತಿಳಿಸಿದ್ದಾರೆ.

ಸೀರೆ ನೋಡೋಕೆ ಇಷ್ಟು ಸಿಂಪಲ್ ಆದರೆ Rashmika Mandanna ಮಾತ್ರ 31 ಸಾವಿರ ಕೊಟ್ಟಿದ್ದಾರೆ!

'ದಕ್ಷಿಣದ ಚಿತ್ರಗಳು ಮತ್ತು ಸೂಪರ್‌ಸ್ಟಾರ್‌ಗಳು ಈ ಮಟ್ಟ ತಲುಪಲು ಕಾರಣಗಳೆಂದರೆ 'ಅವರು ಭಾರತೀಯ ಸಂಸ್ಕೃತಿಯಲ್ಲಿ ಆಳವಾಗಿ ಬೇರೂರಿದ್ದಾರೆ, ಅವರು ತಮ್ಮ ಕುಟುಂಬಗಳನ್ನು ಪ್ರೀತಿಸುತ್ತಾರೆ ಮತ್ತು ಸಂಬಂಧಗಳು ಸಾಂಪ್ರದಾಯಿಕವಾಗಿವೆ ಹೊರತು ಪಾಶ್ಚಿಮಾತ್ಯವಲ್ಲ, ಅವರ ವೃತ್ತಿಪರತೆ ಮತ್ತು ಉತ್ಸಾಹ ಸಾಟಿಯಿಲ್ಲದವು' ಎಂದು ಕಂಗನಾ ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲ ಬಾಲಿವುಡ್​ನಿಂದ ಈ ಪರಂಪರೆಯನ್ನು ಹಾಳಾಗಲು ಬಿಡಬೇಡಿ. ಬಾಲಿವುಡ್​ನಿಂದ ಭ್ರಷ್ಟರಾಗಬೇಡಿ ಎಂದು ಸಲಹೆಯನ್ನೂ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ವಿಡಿಯೋ ನೋಡಲು ಕ್ಲಿಕಿಸಿ: Asianet Suvarna Entertainment

Video Top Stories