Asianet Suvarna News Asianet Suvarna News

ರಸ್ತೆಯಲ್ಲಿ ಉರುಳಾಡಿದ ಪವನ್ ಕಲ್ಯಾಣ್? ಇವರಿಗೆ ಇಂಥ ಸ್ಥಿತಿ ಬಂದಿದ್ಯಾಕೆ?

ನಟ ಮತ್ತು ಜನಸೇನಾ ಮುಖ್ಯಸ್ಥ ಪವನ್ ಕಲ್ಯಾನ್ರನ್ನ ಆಂಧ್ರ ಪ್ರದೇಶ ಪೊಲೀಸರು ಅನುಮಂಚಿಪಲ್ಲಿಯಲ್ಲಿ ವಶಕ್ಕೆ ಪಡೆದ ಘಟನೆ ನಡೆದಿದೆ. 

First Published Sep 11, 2023, 12:36 PM IST | Last Updated Sep 11, 2023, 12:36 PM IST

ಚಂದ್ರಬಾಬು ನಾಯ್ಡು ಅರೆಸ್ಟ್ ಆದ ಬೆನ್ನಲ್ಲೇ ಅವರ ಭೇಟಿಗೆ ರಸ್ತೆ ಮೂಲಕ ವಿಜಯವಾಡಕ್ಕೆ ತೆರಳುವಾಗ ಗರಿಕಪಾಡು ಚೆಕ್ ಪೋಸ್ಟ್ ಬಳಿ ಪೊಲೀಸರು ಪವನ್ ಕಲ್ಯಾಣ್ ಅವರನ್ನು ತಡೆದಿದ್ದಾರೆ. ಪೊಲೀಸರು ಪವನ್ ಕಲ್ಯಾಣ್‌ಗೆ ಮುಂದುವರಿಯಲು ಬಿಡದ ಕಾರಣ, ಪೊಲೀಸರ ವರ್ತನೆಯನ್ನು ವಿರೋಧಿಸಿ ಪವನ್ ರಸ್ತೆಯಲ್ಲೇ ಮಲಗಿದ್ದರು. ಕೊನೆಗೆ ಪವನ್ ಕಲ್ಯಾಣ್‌ ಅವರನ್ನು ಪೊಲೀಸರು ವಶಕ್ಕೆ ಪಡೆದು ಸ್ವಲ್ಪ ಹೊತ್ತಿನ ನಂತರ ಬಿಡುಗಡೆ ಮಾಡಿದ್ದಾರೆ. 

ಖ್ಯಾತ ನಿರ್ದೇಶಕ ಕಂ ನಟ ರಾಘವ ಲಾರೆನ್ಸ್ ಮತ್ತು ಬಾಲಿವುಡ್ ನಟಿ ಕಂಗನಾ ರಣಾವತ್ ನಟನೆಯ ಬಹುನಿರೀಕ್ಷಿತ ಸಿನಿಮಾ 'ಚಂದ್ರಮುಖಿ 2' ಬಿಡುಗಡೆ ದಿನಾಂಕ ಮುಂದೂಡಲಾಗಿದೆ. ಹಿರಿಯ ನಿರ್ದೇಶಕ ಪಿ. ವಾಸು ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಹಾರರ್ ಕಾಮಿಡಿ ಸಿನಿಮಾ ಸೆಪ್ಟಂಬರ್ 19 ರಂದು ಬಿಡುಗಡೆಗೊಳಿಸಲು ಸಜ್ಜಾಗಿತ್ತು. ಆದರೆ ಇದೀಗ 'ಚಂದ್ರಮುಖಿ 2' ಈ ತಿಂಗಳ ಕೊನೆಯಲ್ಲಿ ಸೆಪ್ಟಂಬರ್ 28ಕ್ಕೆ ವಿಶ್ವಾದ್ಯಂತ ರಿಲೀಸ್ ಆಗಲಿದೆ. ಸುಭಾಷ್ ಕರಣ್ ಅವರು ‘ಲೈಕಾ ಪ್ರೊಡಕ್ಷನ್ಸ್’ ಸಂಸ್ಥೆ ಮೂಲಕ ‘ಚಂದ್ರಮುಖಿ 2’ ಚಿತ್ರ ನಿರ್ಮಿಸಿದ್ದಾರೆ.