
ಮತ್ತೊಮ್ಮೆ ಪೊಲೀಸ್ ಸ್ಟೇಷನ್ಗೆ ಅಲ್ಲು ಅರ್ಜುನ್; ವಕೀಲರ ಸಮ್ಮುಖದಲ್ಲೇ ನಟನ ವಿಚಾರಣೆ
ಪುಷ್ಪಾ-2 ಸಿನಿಮಾ ಬಿಡುಗಡೆ ವೇಳೆ ತೆಲಂಗಾಣದ ಥಿಯೇಟರ್ನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಪೊಲೀಸ್ ವಿಚಾರಣೆಗೆ ಹಾಜರಾಗಿದ್ದಾರೆ. ಈ ಘಟನೆಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಪುತ್ರನ ಮಿದುಳು ನಿಷ್ಕ್ರಿಯಗೊಂಡಿದೆ.
ಪುಷ್ಪಾ-2 ಸಿನಿಮಾ ಬಿಡುಗಡೆ ವೇಳೆ ತೆಲಂಗಾಣದ ಥಿಯೇಟರೊಂದರಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್ ಅವರಿಗೆ ನೋಟೀಸ್ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಟ ಅಲ್ಲು ಅರ್ಜುನ್ ಅವರು ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಈ ಕಾಲ್ತುಳಿತ ಪ್ರಕರಣದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಜೊತೆಗೆ ಗಾಯಗೊಂಡಿದ್ದ ಈ ಮಹಿಳೆಯ ಪುತ್ರನ ಮಿದುಳು ನಿಷ್ಕ್ರಿಯಗೊಂಡಿದೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ನಟ ಚಿಕ್ಕಟಪಲ್ಲಿ ಪೊಲೀಸ್ ಠಾಣೆಗೆ ತಮ್ಮ ವಕೀಲರೊಂದಿಗೆ ಹಾಜರಾಗಿದ್ದಾರೆ. ಥೀಯೇಟರ್ನಲ್ಲಿ ನಡೆದ ದುರಂತಕ್ಕೆ ಸಂಬಂಧಿಸಿದಂತೆ ಅಲ್ಲು ಅರ್ಜುನ್ ಹಾಗೂ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ನಡುವೆ ಈಗಾಗಲೇ ಭಾರಿ ವಾಕ್ಸಮರ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ