
ಪದೇ ಪದೇ ಕನ್ನಡ ಚಿತ್ರರಂಗವನ್ನು ಕೆಣಕುತ್ತಿರೋ ಡರ್ಟಿ ಡೈರೆಕ್ಟರ್ಸ್
ಕನ್ನಡ ಸಿನಿಮಾರಂಗ ವಿಶ್ವಮಟ್ಟದಲ್ಲಿ ಬೆಳೆಯುತ್ತಿದ್ದಂತೆ ಕೆಲ ಕಿಡಿಗೇಡಿಗಳು ಚಿತ್ರರಂಗದ ಬಗ್ಗೆ ಲಘುವಾಗಿ ಮಾತನಾಡಲು ಶುರು ಮಾಡಿದ್ದಾರೆ. ಸ್ಯಾಂಡಲ್ ವುಡ್ ಇಡೀ ಭಾರತವೇ ತಿರುಗಿ ನೋಡುವಂತಹ ಸಿನಿಮಾಗಳನ್ನ ಕೊಡುತ್ತಿದೆ. ಇದನ್ನ ಸಹಿಸಲು ಸಾಧ್ಯವಾಗದೆ ಮನಬಂದಂತೆ ಮಾತನಾಡುತ್ತಿದ್ದಾರೆ. ಈ ರೀತಿ ಆಗ್ತಿರೋದು ಇದೇ ಮೊದಲಲ್ಲ. ಈ ಹಿಂದೆಯೂ ದೊಡ್ಡ ದೊಡ್ಡ ನಿರ್ದೇಶಕರು ಕನ್ನಡ ಇಂಡಸ್ಟ್ರಿ ಕಂಡು ಹೊಟ್ಟೆ ಉರಿದುಕೊಂಡಿದ್ರು.
ಕನ್ನಡ ಸಿನಿಮಾರಂಗ ವಿಶ್ವಮಟ್ಟದಲ್ಲಿ ಬೆಳೆಯುತ್ತಿದ್ದಂತೆ ಕೆಲ ಕಿಡಿಗೇಡಿಗಳು ಚಿತ್ರರಂಗದ ಬಗ್ಗೆ ಲಘುವಾಗಿ ಮಾತನಾಡಲು ಶುರು ಮಾಡಿದ್ದಾರೆ. ಸ್ಯಾಂಡಲ್ ವುಡ್ ಇಡೀ ಭಾರತವೇ ತಿರುಗಿ ನೋಡುವಂತಹ ಸಿನಿಮಾಗಳನ್ನ ಕೊಡುತ್ತಿದೆ. ಇದನ್ನ ಸಹಿಸಲು ಸಾಧ್ಯವಾಗದೆ ಮನಬಂದಂತೆ ಮಾತನಾಡುತ್ತಿದ್ದಾರೆ. ಈ ರೀತಿ ಆಗ್ತಿರೋದು ಇದೇ ಮೊದಲಲ್ಲ. ಈ ಹಿಂದೆಯೂ ದೊಡ್ಡ ದೊಡ್ಡ ನಿರ್ದೇಶಕರು ಕನ್ನಡ ಇಂಡಸ್ಟ್ರಿ ಕಂಡು ಹೊಟ್ಟೆ ಉರಿದುಕೊಂಡಿದ್ರು. ತೆಲುಗು ಸಿನಿಮಾ ನಿರ್ದೇಶಕ ಗೀತಕೃಷ್ಣ ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ತಮಿಳು ಮತ್ತು ತೆಲುಗು ಹಾಗೂ ಕನ್ನಡ ಚಿತ್ರರಂಗದ ಬಗ್ಗೆ ಕೆಟ್ಟದಾಗಿ ಮಾತನಾಡಿ ಸಿನಿಮಾ ಪ್ರೇಮಿಗಳ ಮತ್ತು ಅಭಿಮಾನಿಗಳ ಆಕ್ರೋಶಕ್ಕೆ ಕಾರಣರಾಗಿದ್ದಾರೆ. ತಮಿಳಿನಲ್ಲಿ ವಿಪರೀತ ಕಾಸ್ಟಿಂಗ್ ಕೌಚ್ ಇದೆ. ಎಲ್ಲ ಸ್ಟಾರ್ ನಟರಿಗೂ 'ಆ' ಚಟವಿದೆ ಎಂದಿದ್ದಾರೆ.