Asianet Suvarna News Asianet Suvarna News

ದೆಹಲಿ ನಿಜಾಮುದ್ದೀನ್ ಧರ್ಮ ಸಭೆಯಲ್ಲಿ ಪಾಲ್ಗೊಂಡ ಐವರನ್ನು ಬಂಧಿಸಿದ ಕರ್ನಾಟಕ ಪೊಲೀಸರು

ಕೊರೋನಾ ವೈರಸ್‌ನಿಂದ ಮೃತಪಟ್ಟಿದ್ದ ತುಮಕೂರಿನ ವೃದ್ಧ ಸಹಾ ಈ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ. ಬಳ್ಳಾರಿ, ಬಾಗಲಕೋಟೆ ಸೇರಿದಂತೆ ರಾಜ್ಯದ 9 ಜಿಲ್ಲೆಯ ಮಂದಿ ಈ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಬೆಂಗಳೂರು(ಏ.01): ದೇಶಾದ್ಯಂತ ತಲ್ಲಣ ಮೂಡಿಸಿರುವ ಕೊರೋನಾ ವೈರಸ್, ಇದೀಗ ಕರ್ನಾಟಕದಲ್ಲೂ ಕಳವಳವನ್ನುಂಟು ಮಾಡುತ್ತಿದೆ. ಕಳೆದ 15 ದಿನಗಳ ಹಿಂದೆ ನವದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ಪಾಲ್ಗೊಂಡವರಲ್ಲಿ ಕೋವಿಡ್ 19 ಸೋಂಕು ಪತ್ತೆಯಾಗಿತ್ತು.

ಇಂದಿನಿಂದಲೇ ಒಟ್ಟಿಗೆ 2 ತಿಂಗಳ ಪಡಿತರ ವಿತರಣೆ: ಸಚಿವ ಗೋಪಾಲಯ್ಯ

ಇನ್ನು ಕೊರೋನಾ ವೈರಸ್‌ನಿಂದ ಮೃತಪಟ್ಟಿದ್ದ ತುಮಕೂರಿನ ವೃದ್ಧ ಸಹಾ ಈ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದ. ಬಳ್ಳಾರಿ, ಬಾಗಲಕೋಟೆ ಸೇರಿದಂತೆ ರಾಜ್ಯದ 9 ಜಿಲ್ಲೆಯ ಮಂದಿ ಈ ಧರ್ಮ ಸಭೆಯಲ್ಲಿ ಪಾಲ್ಗೊಂಡಿದ್ದರು ಎನ್ನಲಾಗಿದೆ.

ಲಾಕ್‌ಡೌನ್‌ನಲ್ಲಿಯೂ ದೆಹಲಿಯಲ್ಲಿ ಧಾರ್ಮಿಕ ಸಭೆ; ಕರ್ನಾಟಕಕ್ಕೂ ತಟ್ಟಿದ ಎಫೆಕ್ಟ್!

ಈ ವಿಚಾರ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ಪೊಲೀಸರು ಬಳ್ಳಾರಿಯಲ್ಲಿ ಚುರುಕಿನ ಕಾರ್ಯಾಚರಣೆ ನಡೆಸಿ ತಡರಾತ್ರಿ 5 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತಾದ ಗ್ರೌಂಡ್ ರಿಪೋರ್ಟ್ ಇಲ್ಲಿದೆ ನೋಡಿ.  
 

Video Top Stories