ಬೆಂಗಳೂರು ಲಾಕ್‌ಡೌನ್: ರಸ್ತೆಯಲ್ಲಿ ಬೇಕಾಬಿಟ್ಟಿ ಓಡಾಡುವವರಿಗೆ ಬಿಸಿ ಮುಟ್ಟಿಸಿದ ಖಾಕಿ ಪಡೆ

ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಲಾಕ್‌ಡೌನ್ ಮುಗಿದ ಬಳಿಕವಷ್ಟೇ ಮಾಲೀಕರಿಗೆ ಹಿಂತಿರುಗಿಸಲಿದ್ದಾರೆ. ವಾಹನಗಳನ್ನು ವಶಕ್ಕೆ ಪಡೆಯುವುದು ಮಾತ್ರವಲ್ಲದೇ ಕೇಸನ್ನು ದಾಖಲಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಏ.04): ಭಾರತ ಲಾಕ್‌ಡೌನ್‌ಗೆ ಕ್ಯಾರೇ ಎನ್ನುತ್ತಿಲ್ಲ ಸಿಲಿಕಾನ್ ಸಿಟಿಯ ಜನ. ಹೀಗಾಗಿ ಬೇಕಾಬಿಟ್ಟಿ ಓಡಾಡುವ ವಾಹನ ಸವಾರರಿಗೆ ಬಿಸಿ ಮುಟ್ಟಿಸಲು ಖಾಕಿ ಪಡೆ ಮುಂದಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ದಶಕಗಳ ನಂತ್ರ ಜಲಂಧರ್ ನಿವಾಸಿಗಳಿಗೆ ಹಿಮಾಚಲ ಪರ್ವತ ಶ್ರೇಣಿ ದರ್ಶನ

ಮಲ್ಲೇಶ್ವರಂ, ಯಶವಂತಪುರ, ಬ್ಯಾಟರಾಯನಪುರ ಸೇರಿದಂತೆ ಹಲವೆಡೆ ಸುವರ್ಣ ನ್ಯೂಸ್ ರಿಯಾಲಿಟಿ ಚೆಕ್ ನಡೆಸಿದ್ದು, ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿರುವುದು ಬೆಳಕಿಗೆ ಬಂದಿದೆ.

"

ಲಾಕ್‌ಡೌನ್‌: ನಂಜನಗೂಡಿನಲ್ಲಿ ಪುಟ್ಟ ರಥ..! ಸರಳ ರಥೋತ್ಸವ

ಕೊರೋನಾ ವೈರಸ್ ಭೀತಿಯಿಂದಾಗಿ ಈಗಾಗಲೇ 21 ದಿನಗಳ ಲಾಕ್‌ಡೌನ್ ಘೋಷಿಸಲಾಗಿದೆಯಾದರೂ ಜನರು ಡೋಂಟ್ ಕೇರ್ ಎನ್ನುವಂತೆ ವರ್ತಿಸುತ್ತಿದ್ದಾರೆ. ಅನಾವಶ್ಯಕವಾಗಿ ಓಡಾಡುವ ವಾಹನಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಲಾಕ್‌ಡೌನ್ ಮುಗಿದ ಬಳಿಕವಷ್ಟೇ ಮಾಲೀಕರಿಗೆ ಹಿಂತಿರುಗಿಸಲಿದ್ದಾರೆ. ವಾಹನಗಳನ್ನು ವಶಕ್ಕೆ ಪಡೆಯುವುದು ಮಾತ್ರವಲ್ಲದೇ ಕೇಸನ್ನು ದಾಖಲಿಸಿದ್ದಾರೆ.

Related Video