ಏಪ್ರಿಲ್ 14ರ ಬಳಿಕ ರಾಜ್ಯದಲ್ಲಿ ಲಾಕ್ಡೌನ್ ತೆರವು..?
ಕರ್ನಾಟಕ ಮುಖ್ಯ ಕಾರ್ಯದರ್ಶಿ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಲಾಕ್ಡೌನ್ ತೆರವು ಆದ ಕೂಡಲೇ ತೆಗೆದುಕೊಳ್ಳಬೇಕಾದ 10 ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.
ಬೆಂಗಳೂರು(ಏ.08): ಕರ್ನಾಟಕ ಮುಖ್ಯ ಕಾರ್ಯದರ್ಶಿ ಎಲ್ಲ ಇಲಾಖೆಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು, ಲಾಕ್ಡೌನ್ ತೆರವು ಆದ ಕೂಡಲೇ ತೆಗೆದುಕೊಳ್ಳಬೇಕಾದ 10 ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 24ರಂದು ದೇಶಾದ್ಯಂತ 21 ದಿನಗಳ ಕಾಲ ಲಾಕ್ಡೌನ್ ಘೋಷಿಸಿದ್ದರು. ಇದಾದ ಬಳಿಕ ಮುಂದೇನು ಎನ್ನುವುದು ಮಿಲಿಯನ್ ಡಾಲರ್ ಪ್ರಶ್ನೆಯಾಗಿ ಪರಿಣಮಿಸಿದೆ.
ಏಪ್ರಿಲ್ 14ರ ಬಳಿಕ 11 ರಾಜ್ಯಗಳಲ್ಲಿ ಮುಂದುವರೆಯುತ್ತೆ ಲಾಕ್ಡೌನ್..!
ಈ ಪತ್ರವೀಗ ಹಲವು ಚರ್ಚೆಗಳನ್ನು ಹುಟ್ಟುಹಾಕಿದೆ. ಅಂದರೆ ಏಪ್ರಿಲ್ 14ರ ಬಳಿಕ ಲಾಕ್ ತೆರವಾಗುತ್ತಾ ಎನ್ನುವ ವಾದಕ್ಕೆ ಮತ್ತಷ್ಟು ಬಲ ಬಂದಂತೆ ಆಗಿದೆ. ಅಷ್ಟಕ್ಕೂ ಲಾಕ್ಡೌನ್ ತೆರವಾಗುವುದು ನಿಜಾನಾ? ನೀವೇ ನೋಡಿ ಇಲ್ಲಿದೆ ಡೀಟೈಲ್ಸ್.