ತುರ್ತು ಚಿಕಿತ್ಸೆ ಇದ್ದರೆ ಮಾತ್ರ ಗಡಿ ತೆರವುಗೊಳಿಸಿ : ಸುಪ್ರೀಂ ಸೂಚನೆ
ಕೇರಳ, ಕರ್ನಾಟಕ ಗಡಿ ಬಂದ್ ವಿವಾದ ಅಂತ್ಯವಾಗಿದೆ. ತುರ್ತು ಚಿಕಿತ್ಸೆ ಇದ್ದರೆ ಮಾತ್ರ ಗಡಿ ತೆರವುಗೊಳಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಬೆಂಗಳೂರು (ಏ. 07): ಕೇರಳ, ಕರ್ನಾಟಕ ಗಡಿ ಬಂದ್ ವಿವಾದ ಅಂತ್ಯವಾಗಿದೆ. ತುರ್ತು ಚಿಕಿತ್ಸೆ ಇದ್ದರೆ ಮಾತ್ರ ಗಡಿ ತೆರವುಗೊಳಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಕೇರಳ- ಕರ್ನಾಟಕ ಗಡಿ ಬಂದ್: ಸುಪ್ರೀಂನಲ್ಲಿಂದು ಅರ್ಜಿ ವಿಚಾರಣೆ
ಕೇರಳದಿಂದ ಕರ್ನಾಟಕಕ್ಕೆ ಸೋಂಕು ಹರಡುತ್ತಿರುವುದು ಹೆಚ್ಚಾಗುತ್ತಿದೆ ಎಂದು ರಾಜ್ಯ ಸರ್ಕಾರ ಕಾಸರಗೋಡು ಸಂಪರ್ಕಿಸುವ ರಸ್ತೆಯನ್ನು ಬಂದ್ ಮಾಡಿಸಿತ್ತು. ಈ ಬಗ್ಗೆ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಅಗತ್ಯ ವಸ್ತುಗಳ ವಸ್ತುಗಳು ಹಾಗೂ ವೈದ್ಯಕೀಯ ಸೇವೆಗಾದರೂ ಅನುವು ಮಾಡಿಕೊಡಬೇಕೆಂದು ಹೇಳಿತ್ತು. ಆದರೆ ಇದಕ್ಕೆ ಒಪ್ಪದ ರಾಜ್ಯ ಸರ್ಕಾರ ಸುಪ್ರೀಂ ಮೆಟ್ಟಿಲೇರಿತ್ತು.