Asianet Suvarna News Asianet Suvarna News

ಕೊರೋನಾ ವೈರಸ್: ರಾಜ್ಯಾದ್ಯಂತ ಲಾರಿ ಸಂಚಾರ ಬಂದ್!

ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಲಾರಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸರಕು ಸಾಗಾಣಿಕೆ ಬಂದ್ ಆಗಿದೆ. ಈ ಕುರಿತು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸ್ಪಷ್ಪಪಡಿಸಿದ್ದಾರೆ. 

ಬೆಂಗಳೂರು(ಮಾ.23): ಕೊರೋನಾ ವೈರಸ್ ಹರಡುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಲಾರಿ ಸಂಚಾರ ಸ್ಥಗಿತಗೊಳಿಸಲಾಗಿದೆ. ಹೀಗಾಗಿ ಸರಕು ಸಾಗಾಣಿಕೆ ಬಂದ್ ಆಗಿದೆ. ಈ ಕುರಿತು ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸ್ಪಷ್ಪಪಡಿಸಿದ್ದಾರೆ. 

ಶೇ.50 ರಷ್ಟು KSRTC ನೌಕರರಿಗೆ ರಜೆ ಘೋಷಣೆ!

ಇನ್ನು ಕೊರೋನಾ ವೈರಸ್ ಹರಡದಂತೆ ತಡೆಯಲು ಜನರು ಮನೆಯಿಂದ ಹೊರಬರಬೇಡಿ ಎಂದು ಮನವಿ ಮಾಡಲಾಗುತ್ತಿದೆ. ಇದೀಗ ವಿದೇಶದಿಂದ ಮರಳಿದ ವೈದ್ಯನೊರ್ವ ಸೂಚನೆ ಧಿಕ್ಕರಿಸಿ ಕರ್ತವ್ಯಕ್ಕೆ ಹಾಜರಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.