Asianet Suvarna News Asianet Suvarna News

ಕೊರೋನಾ ಸಂತ್ರಸ್ಥರ ನೆರವಿಗೆ 2 ಕೋಟಿ ರುಪಾಯಿ ನೀಡಿದ ಸಂಸದ ರಾಜೀವ್ ಚಂದ್ರಶೇಖರ್

ಆಸ್ಫತ್ರೆಯಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಬರೋಬ್ಬರಿ 2 ಕೋಟಿ ರುಪಾಯಿ ಹಣವನ್ನು ನೀಡುವ ಮೂಲಕ ಸಂಸದ ರಾಜೀವ್ ಚಂದ್ರಶೇಖರ್ ಮಾದರಿಯಾಗಿದ್ದಾರೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಮಾ.27): ಕೊರೋನಾ ಸಂತ್ರಸ್ಥರ ನೆರವಿಗೆ ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಧಾವಿಸಿದ್ದು, ತಮ್ಮ ಸಂಸದರ ನಿಧಿಯಿಂದ ಎರಡು ಕೋಟಿ ರುಪಾಯಿ ಹಣವನ್ನು ವಿಕ್ಟೋರಿಯಾ ಆಸ್ಫತ್ರೆಗೆ ನೀಡಿದ್ದಾರೆ.

ಕೊರೋನಾ ವೈರಸ್ ವಿರುದ್ಧ ಹೋರಾಟ; ಸರ್ಕಾರಕ್ಕೆ 50 ಲಕ್ಷ ರೂ ನೀಡಿದ ಸಚಿನ್ ತೆಂಡುಲ್ಕರ್!

ಬೆಂಗಳೂರಿನ ವಿಕ್ಟೋರಿಯಾ ಆಸ್ಫತ್ರೆಯಲ್ಲಿ ಕೋವಿಡ್ 19 ಸೋಂಕು ಹೊಂದಿರುವ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಆಸ್ಫತ್ರೆಯಲ್ಲಿ ಚಿಕಿತ್ಸೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಬರೋಬ್ಬರಿ 2 ಕೋಟಿ ರುಪಾಯಿ ಹಣವನ್ನು ನೀಡುವ ಮೂಲಕ ಕೊರೋನಾ ವೈರಸ್ ಸಂತ್ರಸ್ಥರಿಗೆ ನೆರವಾಗಿದ್ದಾರೆ. ಮಾಜಿ ಕ್ರಿಕೆಟಿಗ ಸಚಿನ್ ತೆಂಡುಲ್ಕರ್ ಕೂಡಾ ಪ್ರಧಾನಮಂತ್ರಿ ರಾಷ್ಟ್ರೀಯ ವಿಕೋಪ ನಿಧಿಗೆ 50 ಲಕ್ಷ ರುಪಾಯಿ ದೇಣಿಗೆ ನೀಡಿ ಹಲವರಿಗೆ ಸ್ಫೂರ್ತಿಯಾಗಿದ್ದಾರೆ.

ಮುಂದಿನ 3 ತಿಂಗಳು EMI ಪಾವತಿ ಮಾಡೋದು ಬೇಡ್ವಾ..?

ಈಗಾಗಲೇ ರಾಜ್ಯ ಸರ್ಕಾರ ನಗರದ ವಿಕ್ಟೋರಿಯ ಆಸ್ಪತ್ರೆಯನ್ನು ಕೋವಿಡ್ 19 ಪ್ರತ್ಯೇಕ ನಿಗಾ ಘಟಕವನ್ನಾಗಿ ಪರಿವರ್ತಿಸಿತ್ತು. ಆಸ್ಪತ್ರೆಗೆ ತುರ್ತಾಗಿ ಬೇಕಾದ ಮಾಸ್ಕ್, ವೆಂಟಿಲೇಟರ್ ಖರೀದಿಸಲು ಸಂಸದ ರಾಜೀವ್ ಚಂದ್ರಶೇಖರ್ ನೆರವಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.