ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ಕೊಟ್ಟ ವೇಗಿ ಶ್ರೀಶಾಂತ್..!

ಅನುಭವಿ ವೇಗಿ ಶ್ರೀಶಾಂತ್ ಹಾಗೂ ಮತ್ತವರ ಕುಟುಂಬ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿ, ದೇವರ ಆಶೀರ್ವಾದ ಪಡೆದುಕೊಂಡಿದ್ದಾರೆ

Share this Video
  • FB
  • Linkdin
  • Whatsapp

ತಿರುಪತಿ(ಆ.02): ಟೀಂ ಇಂಡಿಯಾ ಅನುಭವಿ ವೇಗಿ ಎಸ್. ಶ್ರೀಶಾಂತ್, ಇಂದು ಮುಂಜಾನೆ ತಿರುಪತಿ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ವಿಜಯ್ ಶಂಕರ್ ಅವರಂತೆ ಶ್ರೀಶಾಂತ್ ಕೂಡಾ ತಮ್ಮ ಕುಟುಂಬದ ಜತೆ ದೇವಸ್ಥಾನಕ್ಕೇ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. 

Add Asianetnews Kannada as a Preferred SourcegooglePreferred

ಈ ಸಂದರ್ಭದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀಶಾಂತ್, ಮುಂಬರುವ ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಉತ್ತಮ ಪ್ರದರ್ಶನ ತೋರುವ ವಿಶ್ವಾಸವಿದೆ ಎಂದು ಹೇಳಿದ್ದಾರೆ. ಇದೇ ವೇಳೆ ಭಾರತ ತಂಡವು ವಿಶ್ವಕಪ್ ಟೂರ್ನಿಯಲ್ಲಿ ಚಾಂಪಿಯನ್ ಆಗಲಿ ಎಂದು ಶುಭ ಹಾರೈಸಿದ್ದಾರೆ.

Related Video