ಟೀಂ ಇಂಡಿಯಾ ಡೆತ್ ಓವರ್ ಬೌಲಿಂಗ್‌ ಬಗ್ಗೆ ಗಮನ ಹರಿಸಲಿ: ಇರ್ಫಾನ್ ಪಠಾಣ್

* ಭಾರತ-ದಕ್ಷಿಣ ಆಫ್ರಿಕಾ ನಡುವಿನ ಪಂದ್ಯಕ್ಕೂ ಮುನ್ನ ಇರ್ಫಾನ್ ಪಠಾಣ್‌ ಸಂದರ್ಶನ
* ಏಷ್ಯಾನೆಟ್ ನ್ಯೂಸ್‌ ಜತೆ ಮನಬಿಚ್ಚಿ ಮಾತನಾಡಿದ ಮಾಜಿ ಕ್ರಿಕೆಟಿಗ
* ದೇಶಿ ಕ್ರಿಕೆಟ್ ಪಂದ್ಯ ವೀಕ್ಷಿಸಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
* ಟಿ20 ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಸಜ್ಜಾಗಿದ್ದು, ಡೆತ್ ಓವರ್‌ ಬಗ್ಗೆ ಗಮನ ನೀಡಬೇಕಿದೆ

Share this Video
  • FB
  • Linkdin
  • Whatsapp

ತಿರುವನಂತಪುರಂ(ಸೆ.28): ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯವಿಂದು ಇಲ್ಲಿನ ಗ್ರೀನ್‌ಫೀಲ್ಡ್‌ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯ ಆರಂಭಕ್ಕೂ ಮುಂಚೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್‌ ಪಠಾಣ್ ಏಷ್ಯಾನೆಟ್‌ ನ್ಯೂಸ್‌ ನೆಟ್‌ವರ್ಕ್‌ ಜತೆ ಎಕ್ಸ್‌ಕ್ಲೂಸಿವ್ ಆಗಿ ಮಾತನಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಮುಂಬರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೂ ಮುನ್ನ ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಈ ಸರಣಿಯು ಸಾಕಷ್ಟು ಮಹತ್ವದ್ದಾಗಿದೆ. ಟೀಂ ಇಂಡಿಯಾ ಅಗ್ರ ಹಾಗೂ ಮಧ್ಯಮ ಕ್ರಮಾಂಕ ಸೆಟ್ ಆಗಿದ್ದು, ಬೌಲಿಂಗ್ ವಿಭಾಗ ಅದರಲ್ಲೂ ಡೆತ್ ಓವರ್ ಬೌಲಿಂಗ್ ಬಗ್ಗೆ ಹೆಚ್ಚಿನ ಗಮನ ಹರಿಸಬೇಕಿದೆ ಎಂದು ಪಠಾಣ್ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ..

Related Video