
ಉಡುಪಿ; ಒಳ್ಳೆ ಹುಡುಗ ರಕ್ಕಸನಾಗಿದ್ದ... 8 ವರ್ಷದ ಲವ್.. ಚಾಕು ಮತ್ತು ಜಾತಿ!
* ಪ್ರೇಯಸಿಗೆ, ಪ್ರಿಯಕರನಿಂದ ಚೂರಿ ಇರಿತ ಪ್ರಕರಣ
* ಚಿಕಿತ್ಸೆ ಫಲಕಾರಿಯಾಗದೇ ಯುವತಿ ಆಸ್ಪತ್ರೆಯಲ್ಲಿ ಸಾವು
* ಸೌಮ್ಯಶ್ರೀ ಭಂಡಾರಿ ಇರಿತಕ್ಕೊಳಗಾಗಿ ಸಾವನ್ನಪ್ಪಿದ ಯುವತಿ
* ಸೌಮ್ಯಳಿಗೆ ಚೂರಿ ಇರಿದು, ತಾನು ಕತ್ತು ಕತ್ತರಿಸಿಕೊಂಡ ಸಂದೇಶ್ ಕುಲಾಲ್
ಉಡುಪಿ(ಆ. 30) ಸಂದೇಶ್ ಲವ್ಸ್ ಸೌಮ್ಯ...ಪ್ರೇಯಸಿಗೆ ಚಾಕುವಿನಿಂದ ಇರಿದ ಪಾಗಲ್ ಪ್ರೇಮಿ ನಂತರ ತಾನೂ ಕೂಡ ಆತ್ಮಹತ್ಯೆಗೆ ಯತ್ನಿಸಿದ್ದ. ಇದು ಉಡುಪಿ ಅಂಬಾಗಿಲು ಸಮೀಪದ ಸಂತೆಕಟ್ಟೆಯ ಪೆಟ್ರೋಲ್ ಬಂಕ್ ಬಳಿ ನಡೆದ ಘೋರ ಘಟನೆ.
Add Asianetnews Kannada as a Preferred Source

ನಿಶ್ವಿತಾರ್ಥವಾದ ಪ್ರೇಯಸಿಯ ಇರಿದು ಕೊಂದ
ಕಾಲೇಜಿನಲ್ಲಿ ಆರಂಭವಾಗಿದ್ದ ಲವ್ ಸ್ಟೋರಿ.. ಪೆಟ್ರೋಲ್ ಬಂಕ್ ನಿಂದ ಸ್ವಲ್ಪ ಮುಂದಕ್ಕೆ ಬರುತ್ತಿದ್ದಂತೆಯೇ ಪರಸ್ಪರ ಜಗಳಕ್ಕೆ ಇಳಿದಿದ್ದಾರೆ. ಜಗಳ ವಿಕೋಪಕ್ಕೆ ತಿರುಗುತ್ತಿದ್ದಂತೆಯೇ ಪ್ರೇಯಸಿಗೆ ಯುವಕ ಚಾಕುವಿನಿಂದ ಇರಿದಿದ್ದಾನೆ. ನಂತರದ ಯುವತಿ ಪ್ರಜ್ಞೆ ತಪ್ಪಿ ಬೀಳುತ್ತಿದ್ದಂತೆಯೇ ತಾನೂ ಕೂಡ ಚಾಕುವಿನಿಂದ ಇರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ. ಹುಡುಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಳು.