Asianet Suvarna News Asianet Suvarna News

ಬೆಳಗಾವಿ ಅಪಘಾತ: ಮೃತ ಕಾರ್ಮಿಕರ ಕುಟುಂಬಗಳಿಗೆ ತಲಾ 7 ಲಕ್ಷ ಪರಿಹಾರ,

ಮೃತರ ಕುಟುಂಬಕ್ಕೆ 7 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ 2 ಲಕ್ಷ ರೂ, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರದ್ದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದರ ಜೊತೆಗೆ ಕಾರ್ಮಿಕ ಇಲಾಖೆಯೂ ಪರಿಹಾರ ಘೋಷಿಸಿದೆ. 

ಬೆಳಗಾವಿ (ಜೂ. 26): ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ನಡೆದಿದೆ.  ಕ್ರೂಸರ್‌ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಮೃತರನ್ನ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಅಂತ ತಿಳಿದು ಬಂದಿದೆ. 

ಬೆಳಗಾವಿ ಅಪಘಾತ: ಮಗನನ್ನು ಕಳೆದುಕೊಂಡಿದ್ದೀನ್ರಿ, ಅಣ್ಣನ ಮಕ್ಕಳು ಅನಾಥರಾದ್ರು, ಕುಟುಂಬಸ್ಥರ ಆಕ್ರಂದನ

ಮೃತರ ಕುಟುಂಬಕ್ಕೆ 7 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಜಿಲ್ಲಾಡಳಿತದಿಂದ 2 ಲಕ್ಷ ರೂ, ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ. ಗಾಯಾಳುಗಳ ಸಂಪೂರ್ಣ ವೆಚ್ಚ ಸರ್ಕಾರದ್ದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಇದರ ಜೊತೆಗೆ ಕಾರ್ಮಿಕ ಇಲಾಖೆಯೂ ಪರಿಹಾರ ಘೋಷಿಸಿದೆ. ಕಾರ್ಮಿಕ ಕಾರ್ಡ್ ಇರುವವರಿಗೆ 5 ಲಕ್ಷ ರೂ ಪರಿಹಾರ, ಕಾರ್ಮಿಕ ಕಾರ್ಡ್ ಇಲ್ಲದವರಿಗೆ ತಲಾ 3 ಲಕ್ಷ ರೂ ಪರಿಹಾರ ಕೊಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್ ಹೇಳಿದ್ದಾರೆ. 

Video Top Stories