POCSO Case: ಮುರುಘಾಶ್ರೀ ವಿರುದ್ಧ ಪ್ರಕರಣ ದಾಖಲು, ಮೊದಲ ಬಾರಿಗೆ ಸಿಎಂ ಪ್ರತಿಕ್ರಿಯೆ

ಮುರುಘಾಮಠದ ವಿರುದ್ಧ ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ.  ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಅಪ್ರಾಪ್ತಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆ ಬಸವಕೇಂದ್ರ ಮುರುಘಾಮಠದ ಡಾ. ಶಿಮುಶ ಸೇರಿದಂತೆ ಐವರ ಮೇಲೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತನಿಖೆ ಬಳಿಕ ಸತ್ಯ ಹೊರಬಲಿದೆ . ಪೋಕ್ಸೋ ಮತ್ತು ಕಿಡ್ನಾಪ್ ಪ್ರಕರಣ ದಾಖಲಾಗಿದೆ. ಪೊಲೀಸರು ಈ ಎರಡೂ ಪ್ರಕರಣಗಳ ತನಿಖೆ ಮಾಡುತ್ತಿದ್ದಾರೆ. ತನಿಖೆ ದೃಷ್ಟಿಯಿಂದ ಇದರ ಬಗ್ಗೆ ಈಗ ಮಾತನಾಡುವುದಿಲ್ಲ ತನಿಖೆಯಿಂದ ಸತ್ಯಾಂಶ ಹೊರಬರಲಿದೆ ಎಂದಿದ್ದಾರೆ.

Add Asianetnews Kannada as a Preferred SourcegooglePreferred

ಮುರುಘಾ ಮಠ ಶ್ರೀಗಳ ವಿರುದ್ಧ ಅತ್ಯಾಚಾರ ಆರೋಪ, ಜುಲೈ 25ಕ್ಕೆ ಬೆಂಗಳೂರಿಗೆ ಬಂದಿದ್ದ ವಿದ್ಯಾರ್ಥಿನಿಯರು!

ಇನ್ನು ಮುರುಘಾಮಠದ ಪರ ವಕೀಲರ ವಿಶ್ವನಾಥಯ್ಯ ಮಾತನಾಡಿ ಮುರುಘಾಶ್ರೀಗಳ ವಿರುದ್ಧ ಸುಳ್ಳು ದೂರು ದಾಖಲಾಗಿದೆ. ಮಠದ ವಿರೋಧಿ ಶಕ್ತಿಗಳು ಈ ಕೃತ್ಯ ನಡೆಸಿದ್ದಾರೆ. ಹಾಸ್ಟೆಲ್‌ ವಿದ್ಯಾರ್ಥಿನಿಯರ ತಲೆಕೆಡಿಸಿ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಪ್ರಕರಣದ ಬಗ್ಗೆ ಕಾನೂನು ಹೋರಾಟ ಮಾಡಲಾಗುವುದು. ಸುಳ್ಳು ದೂರು ನೀಡಿದವರು ಕೇಸ್‌ ವಾಪಸ್‌ ಪಡೆಯಲಿ ಎಂದರು.

Related Video