ವಾಲ್ಮೀಕಿ ನಿಗಮ ಅಧಿಕಾರಿ ಆತ್ಮಹತ್ಯೆ ಕೇಸ್‌: ಪ್ರಕರಣ ಸೂಕ್ಷ್ಮವಾಗಿ ಗಮನಿಸುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌!

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಆತ್ಮಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯಗೆ ನಿರಂತರವಾಗಿ ಕೆಸಿ ವೇಣುಗೋಪಾಲ್‌ ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರಂತೆ. 
 

Share this Video
  • FB
  • Linkdin
  • Whatsapp

ವಾಲ್ಮೀಕಿ ಅಭಿವೃದ್ಧಿ ನಿಗಮ ಅಧಿಕಾರಿ ಆತ್ಮಹತ್ಯೆ ಪ್ರಕರಣ(Valmiki Corporation officer suicide case) ದಿನದಿಂದ ದಿನಕ್ಕೆ ಗಂಭೀರವಾಗುತ್ತಿದೆ. ಈ ಪ್ರಕರಣವನ್ನು ಕಾಂಗ್ರೆಸ್‌ ಹೈಕಮಾಂಡ್‌(Congress Highcommand) ಗಂಭೀರವಾಗಿ ಪರಿಗಣಿಸಿದ್ದು, ಸೂಕ್ಷ್ಮವಾಗಿ ಗಮನಿಸುತ್ತಿದೆ. ಸಿಎಂ ಸಿದ್ದರಾಮಯ್ಯಗೆ(CM Siddaramaiah) ನಿರಂತರವಾಗಿ ಕೆಸಿ ವೇಣುಗೋಪಾಲ್(KC Venugopal)‌ ಕರೆ ಮಾಡಿ ಈ ಬಗ್ಗೆ ವಿಚಾರಿಸುತ್ತಿದ್ದಾರಂತೆ. ಅಲ್ಲದೇ ರಾಜ್ಯ ಸರ್ಕಾರದ ಜೊತೆ ನಿರಂತರವಾಗಿ ಸಂಪರ್ಕದಲ್ಲಿ ಹೈಕಮಾಂಡ್‌ ಇದೆ. ಪ್ರಕರಣದ ತನಿಖೆ ಸಾಗುತ್ತಿರುವ ಮಾರ್ಗದ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಕೇಸ್‌ ಸಂಬಂಧ ಸಚಿವ ನಾಗೇಂದ್ರ ಮೇಲೆ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದು, ಪ್ರಕರಣ ಸಂಬಂಧ ಹೈದರಾಬಾದ್‌ಗೆ ಹೋಗಿ ಬರ್ತೆನೆ ಎಂದಿದ್ದ ಸಚಿವರಿಗೆ ಎಲ್ಲಿಗೂ ಬೇಡ ಸುಮ್ಮನೆ ಇರಿ ಎಂದು ಸಿಎಂ ಸೂಚಿಸಿದ್ದಾರಂತೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇದನ್ನೂ ವೀಕ್ಷಿಸಿ: ಪ್ರಜ್ವಲ್‌ ಟ್ರಾವೆಲ್‌ ಹಿಸ್ಟರಿ ಕಲೆಹಾಕಿದ ಎಸ್‌ಐಟಿ ಅಧಿಕಾರಿಗಳು..ಹಂಗೇರಿಯಾದಿಂದ ವಿಡಿಯೋ ಮಾಡಿದ್ರಾ ಸಂಸದ?

Related Video