CT Ravi on Darshan case: ನಟ ದರ್ಶನ್‌ ಮನಸ್ಥಿತಿ ಅಷ್ಟು ಕ್ರೂರ ಎಂದು ಯಾರೂ ಭಾವಿಸಿರಲಿಲ್ಲ: ಸಿಟಿ ರವಿ

ನಮ್ಮ ಪಕ್ಷ ರೇಣುಕಾಸ್ವಾಮಿ ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು : ದರ್ಶನ್ ಕೊಲೆ ಪ್ರಕರಣ ಸಮಾಜ ತಲೆ ತಗ್ಗಿಸುವಂತದ್ದು,ನಟನ ಮನಸ್ಥಿತಿ ಅಷ್ಟು ಕ್ರೂರ ಅಂತಯಾರೂ ಭಾವಿಸಿರಲಿಲ್ಲ. ಸಿನಿಮಾದಲ್ಲಿ ಹೀರೋಗಳಾದವರು ನಿಜ ಜೀವನದಲ್ಲಿ ಹೀರೋಗಳಾಗಿರಲ್ಲ ಎಂದು ಚಿಕ್ಕಮಗಳೂರಿನಲ್ಲಿ ವಿಧಾನಪರಿಷತ್‌ ಸದಸ್ಯ ಸಿಟಿ ರವಿ(CT Ravi) ಹೇಳಿದ್ದಾರೆ. ದರ್ಶನ್‌(Darshan) ಪ್ರಕರಣ ನೋಡಿದಾಗ ಅವರು ಸಿನಿಮಾದಲ್ಲಿ ಮಾತ್ರ ಹೀರೋ ಆಗಿದ್ರು ಅನ್ಸತ್ತೆ. ನಮ್ಮ ಪಕ್ಷ ರೇಣುಕಾಸ್ವಾಮಿ(Renukaswamy) ಕುಟುಂಬದ ಜೊತೆ ಇದೆ, ಆ ಕುಟುಂಬಕ್ಕೆ ನ್ಯಾಯ ಸಿಗಬೇಕು. ಯಾರಿಗೂ ಕಾನೂನು ಕೈಗೆತ್ತಿಕೊಂಡು ಕ್ರೌರ್ಯ ಮಾಡುವ ಅಧಿಕಾರವಿಲ್ಲ. ಸಾರ್ವಜನಿಕ ಜೀವನದಲ್ಲಿ ಇರುವವರಿಗೆ ಹೆಚ್ಚು ಬದ್ಧತೆ ಇರಬೇಕು. ರಾಜಕಾರಣಿಗಳ ಮೇಲಿನ ಟೀಕೆಗೆ ಅದನ್ನೇ ಮಾಡೋಗಿದ್ರೆ ಗಂಟೆಗೊಂದು ಹೆಣ ಬೀಳ್ತಿತ್ತು. ಆ ಕ್ರೌರ್ಯವನ್ನ ಯಾರೂ ಒಪ್ಪಲು ಸಾಧ್ಯವಿಲ್ಲ. ಅವರಿಗೆ ರಾಜಮರ್ಯಾದೆ, ವಿಶೇಷ ಸವಲತ್ತು ಕೊಡ್ತಿದ್ದಾರೆ ಅನ್ನೋ ಸಂದೇಶವೇ ಒಳ್ಳೆದಲ್ಲ. ಆ ರೀತಿ ಇದ್ರೆ ಬಲ ಇದ್ದವನಿಗೆ, ಬಡವನಿಗೊಂದು ರೀತಿ ಎಂಬ ಸಂದೇಶ ಹೋಗುತ್ತೆ ಎಂದು ಚಿಕ್ಕಮಗಳೂರಿನಲ್ಲಿ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ: ನಟ ದರ್ಶನ್‌​​​ಗೆ ಭೂತದಂತೆ ಕಾಡುತ್ತಿದೆ 'ಡೆವಿಲ್': ಚಿತ್ರತಂಡದಿಂದ ಶೂಟಿಂಗ್ ನಿಲ್ಲಿಸಲು ಚಿಂತನೆ..?

Related Video