Asianet Suvarna News Asianet Suvarna News

ಮಂಗಳೂರು; ಸೆಲೂನ್‌ಗೆ ನುಗ್ಗಿ ಮಹಿಳೆ ಮೇಲೆ ಕೈಹಾಕಿ ಹಣ ದೋಚಿದ್ದವ ಸೆರೆ

* ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ಆರೋಪ
* ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಎಂಬಾತನ ಬಂಧನ
* ಕದ್ರಿಯ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್‌ನಲ್ಲಿ ಜು.1 ರಂದು ನಡೆದಿದ್ದ ಘಟನೆ
* ಮಹಿಳೆಯ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ದಾವೂದ್

ಮಂಗಳೂರು (ಜು. 15) ಯೂನಿಸೆಕ್ಸ್ ಸೆಲೂನ್‌ಗೆ ನುಗ್ಗಿ ಮಹಿಳೆಗೆ ಕಿರುಕುಳ ನೀಡಿ ಹಲ್ಲೆ ಮಾಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಮಂಗಳೂರಿನ ಅತ್ತಾವರ ನಿವಾಸಿ ಅಬ್ದುಲ್ ದಾವೂದ್ ಎಂಬಾತನನ್ನು ಬಂಧಿಸಲಾಗಿದೆ.

'ಜಿಪ್ ತೆಗೆದು ಒಳಗೆ ಬಾ ಎಂದಿದ್ದ ಅನುರಾಗ್'

ಕದ್ರಿಯ ಬ್ಲಿಸ್ ಸಿಗ್ನೇಚರ್ ಯುನಿಸೆಕ್ಸ್ ಸೆಲೂನ್‌ನಲ್ಲಿ ಜು.1 ರಂದು ಘಟಬೆ ನಡೆದಿತ್ತು. ಮಹಿಳೆಯ ಮೇಲೆ ಕೈ ಹಾಕಿ ಕಿರುಕುಳ ನೀಡಿ ಹಲ್ಲೆ ನಡೆಸಿದ್ದ ಆರೋಪ  ಕೇಳಿಬಂದಿತ್ತು. ಆರೋಪಿ 14 ಸಾವಿರ ರೂ. ದರೋಡೆ ನಡೆಸಿ ಪರಾರಿಯಾಗಿದ್ದ. ಮಹಿಳೆಯ ಮೈಗೆ ಕೈ ಹಾಕಿ ಕಿರುಕುಳ ನೀಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು.