ಬೆಂಗಳೂರಿನಲ್ಲಿ ಇಪ್ಪತ್ತು ಬಾರಿ ಕಲ್ಲು ಎತ್ತಿಹಾಕಿ ವ್ಯಕ್ತಿಯ ಕೊಲೆ..!
ಬೆಂಗಳೂರಿನಲ್ಲಿ ಭೀಕರ ಕೊಲೆ ನಡೆದಿದ್ದು, ಸಿಸಿಟಿವಿಯಲ್ಲಿ ಕೊಲೆಯ ಭೀಕರ ದೃಶ್ಯ ಸೆರೆಯಾಗಿದೆ. ಇಪ್ಪತ್ತು ಬಾರಿ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದೆ.
ಬೆಂಗಳೂರು: ಬೆಂಗಳೂರಿನ ಕೆಪಿ ಅಗ್ರಹಾರದಲ್ಲಿ ಭಯಾನಕ ಮರ್ಡರ್ ನಡೆದಿದ್ದು, ಮಂಜುನಾಥ್ ಎಂಬಾತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೂವರು ಮಹಿಳೆಯರು ಹಾಗೂ ಮೂವರು ಪುರುಷರ ಗ್ಯಾಂಗ್'ನಿಂದ ತಲೆ, ಮುಖದ ಮೇಲೆ ಕಲ್ಲು ಎತ್ತಿಹಾಕಿ ಭೀಕರ ಕೊಲೆ ಮಾಡಲಾಗಿದೆ. ಡಿ. 3ರಂದು ಮಧ್ಯರಾತ್ರಿ ಕೆ.ಪಿ ಅಗ್ರಹಾರದ ೫ ನೇ ಕ್ರಾಸ್'ನಲ್ಲಿ ಕೊಲೆ ನಡೆದಿದ್ದು, ಅನೈತಿಕ ಸಂಬಂಧದ ವಿಚಾರಕ್ಕೆ ಕೊಲೆ ನಡೆದಿರೋ ಸಾಧ್ಯತೆಯಿದೆ. ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.