Asianet Suvarna News Asianet Suvarna News

ಬೆಳಗಾವಿ ದೇಗುಲ ವಿಚಾರಕ್ಕೆ ಕೊಲೆ; 25 ವಾಹನಗಳಿಗೆ ಬೆಂಕಿ, ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ

ಬೆಳಗಾವಿ ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. 

First Published Jun 19, 2022, 11:16 AM IST | Last Updated Jun 19, 2022, 11:17 AM IST

ಬೆಳಗಾವಿ (ಜೂ. 19):  ತಾಲೂಕಿನ ಗೌಂಡವಾಡದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದಂತೆ ತಡರಾತ್ರಿ ಓರ್ವ ವ್ಯಕ್ತಿಯ ಕೊಲೆಯಾಗಿದ್ದು, ಗ್ರಾಮದಲ್ಲಿ ಘರ್ಷಣೆ ಸಂಭವಿಸಿದೆ. 

ಕ್ಲಬ್‌ಹೌಸ್‌ನಲ್ಲಿ ಶ್ರೀರಾಮ, ಸೀತಾಮಾತೆಗೆ ಅವಮಾನ, ಕಾಂಗ್ರೆಸ್ ಮುಖಂಡೆ ಮನೆ ಮೇಲೆ ದಾಳಿ

ಈ ವೇಳೆ ನಡೆದ ಹಿಂಸಾಚಾರದಲ್ಲಿ 25ಕ್ಕೂ ಹೆಚ್ಚು ವಾಹನಗಳಿಗೆ ಬೆಂಕಿ ಹಚ್ಚಿ ಕಲ್ಲು ತೂರಾಟ ನಡೆಸಲಾಗಿದೆ. ಸತೀಶ್‌ ಪಾಟೀಲ ಹತ್ಯೆಯಾದ ವ್ಯಕ್ತಿ. ದೇವಸ್ಥಾನಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಲ್ಲಿ ಇವರನ್ನು ಹತ್ಯೆ ಮಾಡಲಾಗಿದೆ. ನಂತರ ಘರ್ಷಣೆ ಭುಗಿಲೆದ್ದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಜನರನ್ನು ವಶಕ್ಕೆ ಪಡೆಯಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡಲು 4 ಕೆಎಸ್‌ಆರ್‌ಪಿ ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ.

Video Top Stories