
ಪಾನಿಪುರಿ ಕಿಟ್ಟಿ ಪ್ರಕರಣ: ದುನಿಯಾ ವಿಜಯ್ಗೆ ಪೊಲೀಸ್ ನೋಟಿಸ್
ಪಾನಿಪುರಿ ಕಿಟ್ಟಿ ಕೇಸ್ ರೀ ಓಪನ್ ಆಗಿದ್ದು, ನಟ ದುನಿಯಾ ವಿಜಯ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ.
ಪಾನಿಪುರಿ ಕಿಟ್ಟಿ ಗಲಾಟೆಗೆ ಸಂಬಂಧಿಸಿದಂತೆ ನಟ ದುನಿಯಾ ವಿಜಯ್ ಅವರಿಗೆ ಹೈಗ್ರೌಂಡ್ ಪೊಲೀಸರು ನೋಟಿಸ್ ನೀಡಿದ್ದಾರೆ. ಪಾನಿಪುರಿ ಕಿಟ್ಟಿ ಜೊತೆಗಿನ ಗಲಾಟೆಗೆ ಸಂಬಂಧಿಸಿದಂತೆ ಮೊನ್ನೆಯಷ್ಟೇ ಕೇಸ್ ರೀ ಓಪನ್ ಆಗಿದೆ. 2018ರಲ್ಲಿ ಕಿಟ್ ವಿರುದ್ಧ ವಿಜಯ್ ಕೇಸ್ ದಾಖಲಿಸಿದ್ದರು. ಕಿಟ್ಟಿ ಪೊಲೀಸ್ ಅಧಿಕಾರಿಯ ಮುಂದೆ ಹಾಜರು ಕೂಡ ಆಗಿದ್ದರು. ಇದೀಗ ಅದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ದುನಿಯಾ ವಿಜಯ್ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದರು. ವಿಚಾರಣೆಗೆ ಹಾಜರಾಗುವಂತೆ ಹೈಗ್ರೌಂಡ್ ಪೊಲೀಸರಿಂದ ನೋಟಿಸ್’ನಲ್ಲಿ ತಿಳಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ