
ಅಧಿಕ ಮಾಸದಲ್ಲಿ ಏನು ಮಾಡಬೇಕು, ಮಾಡಬಾರದು ?
ಇಂದಿನ ಪಂಚಾಂಗ ಫಲಗಳು ಹೇಗಿವೆ? ನಿಮ್ಮ ರಾಶಿಯ ಇಂದಿನ ಭವಿಷ್ಯ ಹೇಗಿದೆ? ದ್ವಾದಶ ರಾಶಿಗಳ ಇಂದಿನ ಭವಿಷ್ಯವನ್ನು ಪ್ರಾಜ್ಞರಾದ ಶ್ರೀಕಂಠ ಶಾಸ್ತ್ರಿಗಳ ಮಾತಿನಲ್ಲಿ ಕೇಳೋಣ. ಯಾವ್ಯಾವ ರಾಶಿಗೆ ಯಾವ ರೀತಿ ಫಲ ಇದೆ ಅನ್ನೋದನ್ನ ನೋಡಿ.
ಇಂದಿನ ಪಂಚಾಂಗ ಫಲಗಳು ಹೀಗಿವೆ. ಶ್ರೀ ಶೋಭಾಕೃನ್ನಾಮ ಸಂವತ್ಸರ, ದಕ್ಷಿಣಾಯನ, ವರ್ಷ ಋತು, ಅಧಿಕ ಶ್ರಾವಣ ಮಾಸ, ಶುಕ್ಲ ಪಕ್ಷ, ಬುಧವಾರ, ದ್ವಿತೀಯ ತಿಥಿ, ಪುಷ್ಯ ನಕ್ಷತ್ರ. ಅಧಿಕ ಮಾಸದಲ್ಲಿ ಶುಭ ಕಾರ್ಯಗಳನ್ನು ಮಾಡುವುದಿಲ್ಲ, ಈ ದಿನಗಳಲ್ಲಿ ಹೆಚ್ಚಿನ ದಾನವನ್ನು ಮಾಡಬೇಕು. ಈ ದಿನ ಬುಧವಾರವಾಗಿರುವುದರಿಂದ ಬುಧನ ಸಂಪ್ರೀತಿಗಾಗಿ ಹೆಸರು ಕಾಳು ದಾನ ಮಾಡುವುದು ಒಳ್ಳೆಯದು.ಅಧಿಕ ಮಾಸವು ವಿಷ್ಣುವಿನೊಂದಿಗೆ ಸಂಬಂಧವನ್ನು ಹೊಂದಿರುವುದರಿಂದ ಈ ಮಾಸದಲ್ಲಿ ತುಳಸಿ ಪೂಜೆಗೆ ವಿಶೇಷ ಸ್ಥಾನವನ್ನು ನೀಡಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ