Asianet Suvarna News Asianet Suvarna News

ಮಂಗಳೂರು ಗೋಲಿಬಾರ್ ಸಮರ್ಥಿಸಿಕೊಂಡ ಸಿಎಂ ಯಡಿಯೂರಪ್ಪ!

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು.

ಮಂಗಳೂರು(ಡಿ.21): ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ನಡೆದ ಪೊಲೀಸ್ ಗೋಲಿಬಾರ್‌ನಲ್ಲಿ ಇಬ್ಬರು ಮೃತಪಟ್ಟಿದ್ದು, ಸಿಎಂ ಯಡಿಯೂರಪ್ಪ ನಗರಕ್ಕೆ ಭೇಟಿ ನೀಡಿ ಪರಿಸ್ಥಿತಿಯ ಪರಾಮರ್ಶೆ ನಡೆಸಿದರು. ಈ ವೇಳೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ಪೊಲೀಸರು ನಡೆಸಿದ ಗೋಲಿಬಾರ್‌ನ್ನು ಸಮರ್ಥಿಸಿಕೊಂಡರು. ಪರಿಸ್ಥಿತಿ ಕೈ ಮೀರಿದ್ದರಿಂದಲೇ ಪೊಲೀಸರು ಗೋಲಿಬಾರ್ ನಡೆಸಿದ್ದಾರೆ ಎಂದು ಸಿಎಂ ಹೇಳಿದರು. ಉದ್ರಿಕ್ತರು ಪೊಲೀಸ್ ಠಾಣೆ ಒಳಗೆ ನುಗ್ಗಿದ್ದರೆ ಭಾರೀ ಅನಾಹುತವೇ ನಡೆದು ಹೋಗುತ್ತಿತ್ತು. ಈ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ತಹಬದಿಗೆ ತರಲು ಪೊಲೀಸರು ಗೋಲಿಬಾರ್ ನಡೆಸಿದ್ದಾರೆ ಎಂದು ಯಡಿಯೂರಪ್ಪ ಸಮರ್ಥನೆ ನೀಡಿದರು.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Video Top Stories