
ವಿದ್ಯಾರ್ಥಿಗಳ ಮಾರಾಮಾರಿ, ರಣ ರಣ ಬಿಸಿಲಲ್ಲೇ ಹೊಡಿ ಬಡಿ..!
ಮಟ ಮಟ ಮಧ್ಯಾಹ್ನದ ಬಿಸಿಲನ್ನೂ ಲೆಕ್ಕಿಸದೇ ವಿದ್ಯಾಥಿಗಳು ಹೊಡೆದಾಡಿಕೊಂಡ ಘಟನೆ ಕೇರಳದಲ್ಲಿ ನಡೆದಿದೆ. ಖಾಸಗಿ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳು ಯುನಿಫಾರ್ಮ್ನಲ್ಲೇ ಬೇಕಾಬಿಟ್ಟಿ ಬಡಿದಾಡಿಕೊಂಡಿದ್ದಾರೆ. ಪರಸ್ಪರ ತಳ್ಳಾಡಿಕೊಂಡು, ವಿದ್ಯಾರ್ಥಿಗಳು ಹೊಡೆದಾಡಿರೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.
ಕಾಸರಗೋಡು (ಅ.19): ಮಟ ಮಟ ಮಧ್ಯಾಹ್ನದ ಬಿಸಿಲನ್ನೂ ಲೆಕ್ಕಿಸದೇ ಕಾಲೇಜಿನ ವಿದ್ಯಾಥಿಗಳು ಹೊಡೆದಾಡಿಕೊಂಡ ಘಟನೆ ಕೇರಳದ ಕಾಸರಗೋಡಿನಲ್ಲಿ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ, ಯುನಿಫಾರ್ಮ್ನಲ್ಲೇ ಇದ್ದ ವಿದ್ಯಾರ್ಥಿಗಳ ಎರಡು ಗುಂಪುಗಳು ಬೇಕಾಬಿಟ್ಟಿ ಬಡಿದಾಡಿಕೊಂಡಿದ್ದಾರೆ. ಪರಸ್ಪರ ತಳ್ಳಾಡಿಕೊಂಡು, ವಿದ್ಯಾರ್ಥಿಗಳು ಹೊಡೆದಾಡಿರೋ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ಯ ವೈರಲ್ ಆಗಿದೆ.
ವಿದ್ಯಾರ್ಥಿಗಳ ಹೊಡೆದಾಟಕ್ಕೆ ಕಾರಣ ಏನೆಂಬುವುದು ತಿಳಿದುಬಂದಿಲ್ಲ.