ಕೊರೋನಾ ಸೋಂಕಿತ ವೃದ್ದೆ ಸಾವು: ಶವ ಸಂಸ್ಕಾರಕ್ಕೆ ಸ್ಥಳೀಯರಿಂದ ವಿರೋಧ..!

ಬಂಟ್ವಾಳದಲ್ಲಿ ನಿನ್ನೆ(ಏ.23) ಮೃತಪಟ್ಟಿದ್ದ ವೃದ್ದೆಯ ಶವ ಸಂಸ್ಕಾರದ ವಿಚಾರವಾಗಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಪಚ್ಚನಾಡಿ ರುದ್ರಭೂಮಿಯಲ್ಲಿ ಶವಸಂಸ್ಕಾರ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿತ್ತು. ಆದರೆ ಜಿಲ್ಲಾಡಳಿತದ ತೀರ್ಮಾನಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಮಂಗಳೂರು(ಏ.24): ರಾಜ್ಯದ ಕೊರೋನಾ ಹಾಟ್‌ಸ್ಪಾಟ್‌ಗಳ ಪೈಕಿ ಮಂಗಳೂರು ಕೂಡಾ ಒಂದಾಗಿದೆ. ಸದ್ಯ ಮಂಗಳೂರಿನಲ್ಲಿ ಎರಡು ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಸ್ಥಳೀಯರಲ್ಲಿ ಮತ್ತಷ್ಟು ಆತಂಕವನ್ನು ಹುಟ್ಟುಹಾಕಿದೆ.

Add Asianetnews Kannada as a Preferred SourcegooglePreferred

ಇದರ ನಡುವೆ ಬಂಟ್ವಾಳದಲ್ಲಿ ನಿನ್ನೆ(ಏ.23) ಮೃತಪಟ್ಟಿದ್ದ ವೃದ್ದೆಯ ಶವ ಸಂಸ್ಕಾರದ ವಿಚಾರವಾಗಿ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ. ಮಂಗಳೂರಿನ ಪಚ್ಚನಾಡಿ ರುದ್ರಭೂಮಿಯಲ್ಲಿ ಶವಸಂಸ್ಕಾರ ನಡೆಸಲು ಜಿಲ್ಲಾಡಳಿತ ತೀರ್ಮಾನಿಸಿತ್ತು. ಆದರೆ ಜಿಲ್ಲಾಡಳಿತದ ತೀರ್ಮಾನಕ್ಕೆ ಸ್ಥಳೀಯರು ವಿರೋಧ ವ್ಯಕ್ತಪಡಿಸಿದ್ದಾರೆ.

ಲಾಕ್‌ಡೌನ್ ಸಡಿಲ: ರಾಜ್ಯದಲ್ಲಿ ಸಹಜ ಸ್ಥಿತಿಯತ್ತ ಜನ-ಜೀವನ

ಈ ವಿಚಾರ ತಿಳಿದು ಸ್ಥಳಕ್ಕೆ ಬಂದ ಶಾಸಕ ಭರತ್ ಶೆಟ್ಟಿ ಕೂಡಾ ವೃದ್ಧೆಯ ಶವಸಂಸ್ಕಾರಕ್ಕೆ ವಿರೋಧ ವ್ಯಕ್ತಪಡಿಸಿದರು. ಸ್ಥಳೀಯರು ಒಪ್ಪಿದರೆ ಮಾತ್ರ ಶವ ಸುಡಲು ಅವಕಾಶ ನೀಡಬೇಕು ಎಂದು ಪೊಲೀಸರು ಹಾಗೂ ಕಮಿಷನರ್‌ಗೆ ಎಚ್ಚರಿಕೆ ನೀಡಿದರು. ಸದ್ಯ ವೃದ್ದೆಯ ಶವ ಆಸ್ಪತ್ರೆಯಲ್ಲಿಯೇ ಇದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ.

Related Video