
ಕರ್ನಾಟಕದಲ್ಲಿ ಕೊರೋನಾ ಭೀತಿ: 7,8,9ನೇ ತರಗತಿ ಪರೀಕ್ಷೆ ಮುಂದೂಡಿಕೆ
ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ 7, 8, 9ನೇ ತರಗತಿ ಪರೀಕ್ಷೆಗಳನ್ನ ಮುಂದೂಡುವಂತೆ ಆದೇಶ ಹೊರಡಿಸಿದೆ.
ಬೆಂಗಳೂರು, [ಮಾ.15]: ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಶಿಕ್ಷಣ ಇಲಾಖೆ 7, 8, 9ನೇ ತರಗತಿ ಪರೀಕ್ಷೆಗಳನ್ನ ಮುಂದೂಡುವಂತೆ ಆದೇಶ ಹೊರಡಿಸಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಭೀತಿ, ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ
ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಎಲ್ಲಾ ಪರೀಕ್ಷೆಗಳನ್ನು ಮುಂದೂಡುವಂತೆ ಆದೇಶ ಹೊರಡಿಸಿದೆ. ನಾಳೆಯಿಂದ ಅಂದ್ರೆ ಮಾರ್ಚ್ 16ರಿಂದ 7 ನೇ ತರಗತಿ ಪರೀಕ್ಷೆ ಪ್ರಾರಂಭವಾಗಬೇಕಿದ್ದ ಹಿನ್ನೆಲೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.