
'ರಾಮಾಯಣ, ಭಗವದ್ಗೀತೆ ವಿಚಾರಗಳು ಪಠ್ಯದಲ್ಲಿ ಇವೆ,ಈಗ ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳವ ಅವಶ್ಕಕತೆ ಇಲ್ಲ;
:ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮತ್ತೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿದ್ದಾರೆ.
ಬೆಂಗಳೂರು, (ಮಾ.19): ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮತ್ತೆ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ವಿರೋಧಿಸಿದ್ದಾರೆ.
Add Asianetnews Kannada as a Preferred Source

National Education Policy: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ಯಾವಾಗ? ಸ್ಪಷ್ಟನೆ ಕೊಟ್ಟ ಸಚಿವ
ಶಾಲಾ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ಮಾಡುವ ಬಗ್ಗೆ ಪ್ರತಿಕ್ರಿಯಿಸಿರುವ ಡಿಕೆ ಶಿವಕುಮಾರ್, ಆರಂಭದಿಂದಲೇ ನಾನು ಎನ್ಇಪಿ ವಿರೋಧ ಮಾಡಿರುವವನು. ಎಲ್ಲಾ ತಿಳಿದವರೇ ಸೇರಿ ಪಠ್ಯಕ್ರಮ ರಚನೆ ಮಾಡಿದ್ದಾರೆ. ಹೊಸದಾಗಿ ಏನನ್ನು ಸೇರಿಸುವ ಅವಶ್ಯಕತೆ ಇಲ್ಲ ಎಂದಿದ್ದಾರೆ. ಅಲ್ಲದೇ ಈಗಾಗಲೇ ರಾಮಾಯಣ, ಭಗವದ್ಗೀತೆ ವಿಚಾರಗಳು ಪಠ್ಯದಲ್ಲಿ ಇವೆ. ಈಗ ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳವ ಅವಶ್ಕಕತೆ ಇಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.