ಸಿಎಂ ಜೊತೆ ಡಾ. ದೇವಿಶೆಟ್ಟಿ ತಂಡದ ಸಭೆ ಮುಕ್ತಾಯ; ಶಾಲೆ ಆರಂಭಕ್ಕೆ ಶಿಫಾರಸ್ಸುಗಳು

- 3 ನೇ ಅಲೆ ರಾಜ್ಯ ಸರ್ಕಾರಕ್ಕೆ ಡಾ. ದೇವಿಶೆಟ್ಟಿ ಸಮಿತಿ ಮಧ್ಯಂತರ ವರದಿ- ಸಿಎಂ ಜೊತೆ ಸಭೆ ಮುಕ್ತಾಯ- ಶಾಲಾ ಆರಂಭದ ಬಗ್ಗೆ ಕೆಲವು ಪ್ರಮುಖ ಶಿಫಾರಸ್ಸುಗಳು

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 22): ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣ ಇಳಿಮುಖವಾಗಿದೆ ಎಂದು ಏಕಾಏಕಿ ರಾಜ್ಯಾದ್ಯಂತ ಶಾಲೆಗಳನ್ನು ಪುನರಾರಂಭ ಮಾಡಬಾರದು. ಬದಲಿಗೆ, ಶಿಕ್ಷಕರು, ಪೋಷಕರಿಗೆ ಗರಿಷ್ಠ ಸಂಖ್ಯೆಯಲ್ಲಿ ಲಸಿಕೆ ಹಾಕಿಸಬೇಕು. ಬಳಿಕ ಆಯಾ ಪ್ರದೇಶದಲ್ಲಿನ ಸುರಕ್ಷತೆ ಆಧರಿಸಿ ‘ವಿಕೇಂದ್ರೀಕರಣ ವ್ಯವಸ್ಥೆ’ ಅಡಿ ಶಾಲೆಗಳ ಆರಂಭಕ್ಕೆ ಸ್ಥಳೀಯವಾಗಿ ನಿರ್ಧಾರ ಮಾಡಬಹುದು ಎಂದು ಡಾ.ದೇವಿಶೆಟ್ಟಿ ನೇತೃತ್ವದಲ್ಲಿ 3ನೇ ಅಲೆ ಸಿದ್ಧತೆ ಕುರಿತು ರಚಿಸಿರುವ ಉನ್ನತ ಮಟ್ಟದ ತಜ್ಞರ ಸಮಿತಿಯು ಸರ್ಕಾರಕ್ಕೆ ಸಲ್ಲಿಸಿರುವ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವರದಿ ಸಲ್ಲಿಕೆ ಬೆನ್ನಲ್ಲೇ ಶಾಲಾ ಪ್ರಾರಂಭದ ಬಗ್ಗೆ ಸಿಎಂ ಮಹತ್ವದ ಪ್ರತಿಕ್ರಿಯೆ

ಈ ಬಗ್ಗೆ ಇಂದು ಸಿಎಂ ಜೊತೆ ಸಭೆ ನಡೆಸಲಾಗಿದೆ. ಶಾಲೆ ಆರಂಭದ ಬಗ್ಗೆ ಕೆಲವು ಶಿಫಾರಸ್ಸುಗಳನ್ನು ಮಾಡಿದ್ದಾರೆ. ಏನದು ಶಿಫಾರಸ್ಸುಗಳು..? ಇಲ್ಲಿದೆ ನೋಡಿ. 

Related Video