1-9 ನೇ ತರಗತಿಗಳಿಗೆ ಎಕ್ಸಾಂ ಮಾಡಬೇಕಾ? ಶಿಕ್ಷಣ ಇಲಾಖೆಯಲ್ಲಿ ಇಂದು ಮಹತ್ವದ ಸಭೆ
ವಿದ್ಯಾರ್ಥಿಗಳ ಪರೀಕ್ಷೆ ಸಂಬಂಧ ಇಂದು ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಸಭೆ ನಡೆಯಲಿದೆ. 1-9 ನೇ ತರಗತಿಗಳಿಗೆ ಎಕ್ಸಾಂ ಮಾಡಬೇಕಾ? ಬೇಡವಾ ಎನ್ನುವುದರ ಕುರಿತು ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ.
ಬೆಂಗಳೂರು (ಏ. 05): ವಿದ್ಯಾರ್ಥಿಗಳ ಪರೀಕ್ಷೆ ಸಂಬಂಧ ಇಂದು ಶಿಕ್ಷಣ ಇಲಾಖೆಯಲ್ಲಿ ಮಹತ್ವದ ಸಭೆ ನಡೆಯಲಿದೆ. 1-9 ನೇ ತರಗತಿಗಳಿಗೆ ಎಕ್ಸಾಂ ಮಾಡಬೇಕಾ? ಬೇಡವಾ ಎನ್ನುವುದರ ಕುರಿತು ಮಹತ್ವದ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ. ಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ಇಂದು ಬೆಳಿಗ್ಗೆ 10.30 ಕ್ಕೆ ಸಭೆ ನಡೆಯಲಿದೆ. ಖಾಸಗಿ ಶಾಲೆಗಳ ಸಂಘಟನೆಗಳು, ಶಿಕ್ಷಣ ತಜ್ಞರು ಭಾಗಿಯಾಗಲಿದ್ದಾರೆ.