Hijab Row ಹಿಜಾಬ್ ವಿವಾದದ ಮಧ್ಯೆ ಕುಕ್ಕಿದ ಕುಂಕುಮ, ಶಿಕ್ಷಣ ಸಚಿವ ಹೇಳಿದ್ದಿಷ್ಟು...

ಈ ಹಿಜಾಬ್ ವಿವಾದದ ಮಧ್ಯೆ ಕುಂಕುಮ ವಿಚಾರ ಬಂದಿದ್ದು, ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ  ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು

Share this Video
  • FB
  • Linkdin
  • Whatsapp

ಬೆಂಗಳೂರು, (ಫೆ.17): ಇನ್ನು ಯಾವುದೇ ಧರ್ಮದ ಸಂಕೇತವನ್ನು ಶಾಲಾ-ಕಾಲೇಜಿನಿಲ್ಲಿ ಧರಿಸುವಂತಿಲ್ಲ ಎಂದ ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದ್ದು, ಅಂತಿಮವಾಗಿ ಕೋರ್ಟ್ ಯಾವ ತೀರ್ಮಾನ ಕೈಗೊಳ್ಳಲಿದೆ ಎಂದು ಇಡೀ ರಾಜ್ಯ ಕಾದು ಕುಳಿತಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Hijab Row ಮತ್ತೋರ್ವ ವಕೀಲ ಎಂಟ್ರಿ, ಕೋರ್ಟ್‌ನಲ್ಲಿ ಕಾವೇರಿದ ಹಿಜಾಬ್ ವಾದ-ಪ್ರತಿವಾದ

ಆದ್ರೆ, ಇತ್ತ ಹಿಜಾಬ್ ಧರಿಸಿ ಬರದಂತೆ ಹೈಕೋರ್ಟ್ ( High Court ) ಮಧ್ಯಂತರ ಆದೇಶ ನೀಡಿದ್ದರೂ, ಕೋರ್ಟ್ ಆದೇಶಕ್ಕೆ ಡೋಂಟ್ ಕೇರ್ ಎನ್ನುವಂತೆ ವಿದ್ಯಾರ್ಥಿಗಳು ಹಿಜಾಬ್ ಧರಿಸಿಯೇ ( Hijab Row ) ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ನಿನ್ನೆಯಿಂದ (ಫೆ.16) ಆರಂಭವಾದ ಕಾಲೇಜುಗಳಿಗೆ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದಿದ್ದರು. ಕಾಲೇಜು ಬೇಕಾದ್ರೆ ಬಿಡ್ತೀವಿ. ಆದ್ರೆ, ಹಿಜಾಬ್ ಬಿಡಲ್ಲ ಅಂತ ಕೆಲ ವಿದ್ಯಾರ್ಥಿಗಳು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಕೆಲ ಜಿಲ್ಲೆಗಳಲ್ಲಿ ಗಲಾಟೆ, ಗದ್ದಲಗಳು ಆಗಿರುವ ಘಟನೆಗಳು ನಡೆದಿವೆ. 

ಇನ್ನು ಈ ಹಿಜಾಬ್ ವಿವಾದದ ಮಧ್ಯೆ ಕುಂಕುಮ ವಿಚಾರ ಬಂದಿದ್ದು, ಈ ಬಗ್ಗೆ ಏಷ್ಯಾನೆಟ್ ಸುವರ್ಣ ನ್ಯೂಸ್‌ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ ಹೇಳಿದ್ದಿಷ್ಟು

Related Video