Asianet Suvarna News Asianet Suvarna News

ಸದ್ಯಕ್ಕೆ ಶಾಲೆ ಪ್ರಾರಂಭಿಸುವ ನಿರ್ಧಾರವನ್ನು ಕೈಬಿಟ್ಟ ಸರ್ಕಾರ, ಶಿಕ್ಷಣ ಸಚಿವರು ಹೇಳಿದ್ದು ಹೀಗೆ

 ಕರ್ನಾಟಕದಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದನ್ನು ಸರ್ಕಾರ ಕೈಬಿಟ್ಟಿದೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.

ಬೆಂಗಳೂರು, (ಜೂನ್.28): ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ತಗ್ಗಿದ್ದು, ಇದೀಗ ಮೂರನೇ ಅಲೆ ಆತಂಡ ಎದುರಾಗಿದೆ. ಅದರಲ್ಲೂ ಈ ಮೂರನೇ ಅಲೆ ಹೆಚ್ಚು ಮಕ್ಕಳಿಗೆ ಅಪಾಯಕಾರಿ ಎಂದು ವರದಿಗಳು ತಿಳಿಸಿವೆ.

ಶಾಲೆ ಪ್ರಾರಂಭಿಸುವಂತೆ ರುಪ್ಸಾದಿಂದ ಸರ್ಕಾರಕ್ಕೆ ಮನವಿ

ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸದ್ಯಕ್ಕೆ ಶಾಲೆ ಪ್ರಾರಂಭಿಸುವುದನ್ನು ಸರ್ಕಾರ ಕೈಬಿಟ್ಟಿದೆ. ಇನ್ನು ಈ ಬಗ್ಗೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಮಾಧ್ಯಮಗಳಿಗೆ ಸ್ಪಷ್ಟನೆ ಕೊಟ್ಟಿದ್ದಾರೆ.