ಮಕ್ಕಳನ್ನು ಧೈರ್ಯದಿಂದ ಶಾಲೆಗೆ ಕಳಿಸಿ, ಮಕ್ಕಳ ಸುರಕ್ಷತೆ ನಮ್ಮ ಹೊಣೆ: ಸುರೇಶ್
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಗೆ ಮಾತ್ರ ತರಗತಿಗಳು ಆರಂಭವಾಗಲಿವೆ. 6 ರಿಂದ 9 ನೇ ತರಗತಿಗೆ 'ವಿದ್ಯಾಗಮ' ಯೋಜನೆ ಶುರುವಾಗಲಿದೆ. ಸರ್ಕಾರದ ಮಾರ್ಗಸೂಚಿಯಂತೆ ಶಾಲಾ- ಕಾಲೇಜು ಆವರಣದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ.
ಬೆಂಗಳೂರು (ಜ. 01): 10 ತಿಂಗಳುಗಳಿಂದ ಬಂದ್ ಆಗಿದ್ದ ರಾಜ್ಯದ ಎಲ್ಲಾ ಶಾಲೆ- ಪಿಯು ಕಾಲೇಜುಗಳು ಪುನಾರಂಭಗೊಂಡಿವೆ. ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಕಲ ಸಿದ್ಧತೆ ಹಾಗೂ ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಶಾಲಾ- ಕಾಲೇಜು ಆವರಣವನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ.
ಇಂದಿನಿಂದ ಶಾಲೆ, ಕಾಲೇಜುಗಳ ಪುನಾರಂಭ; ವಿದ್ಯಾರ್ಥಿಗಳಿಗೆ ಈ ಷರತ್ತುಗಳು ಅನ್ವಯ!
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಮಕ್ಕಳಿಗೆ ಮಾತ್ರ ತರಗತಿಗಳು ಆರಂಭವಾಗಲಿವೆ. 6 ರಿಂದ 9 ನೇ ತರಗತಿಗೆ 'ವಿದ್ಯಾಗಮ' ಯೋಜನೆ ಶುರುವಾಗಲಿದೆ. ಸರ್ಕಾರದ ಮಾರ್ಗಸೂಚಿಯಂತೆ ಶಾಲಾ- ಕಾಲೇಜು ಆವರಣದಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಮಕ್ಕಳನ್ನು ಧೈರ್ಯದಿಂದ ಶಾಲೆಗೆ ಕಳಿಸಿ, ಮಕ್ಕಳ ಸುರಕ್ಷತೆ ನಮ್ಮ ಹೊಣೆ. ಪೋಷಕರು ಹೆದರುವ ಅಗತ್ಯ ಇಲ್ಲ. ಮಕ್ಕಳ ಸುರಕ್ಷತೆ ನಮ್ಮ ಹೊಣೆ. 2021 ಎಲ್ಲರಿಗೂ ಶುಭ ತರಲಿ. ಮಕ್ಕಳ ಶೈಕ್ಷಣಿಕ ಭವಿಷ್ಯ ಉಜ್ವಲವಾಗಲಿ' ಎಂದು ಹಾರೈಸಿದ್ಧಾರೆ.