Asianet Suvarna News Asianet Suvarna News

Bhagavad Gita: ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ: ರೇಣುಕಾಚಾರ್ಯ

ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂಬ ವಿಚಾರ ಸದ್ದು ಮಾಡುತ್ತಿದೆ. ' ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ. ಇತಿಹಾಸವನನ್ನು ಪಠ್ಯದಲ್ಲಿ ಅಳವಡಿಸುವುದಲ್ಲಿ ತಪ್ಪೇನಿಲ್ಲ,ಎಂದು ವಿಧಾನಸೌಧದಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ. 

First Published Mar 18, 2022, 4:18 PM IST | Last Updated Mar 18, 2022, 4:18 PM IST

ಬೆಂಗಳೂರು (ಮಾ. 18): ಗುಜರಾತ್ ಮಾದರಿಯಲ್ಲಿ ಕರ್ನಾಟಕದಲ್ಲೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಸಬೇಕು ಎಂಬ ವಿಚಾರ ಸದ್ದು ಮಾಡುತ್ತಿದೆ. ' ಶಿಕ್ಷಣ ವ್ಯವಸ್ಥೆಯಲ್ಲಿ ಹೊಸ ಅಲೆ ಸೃಷ್ಟಿಸಲಿದೆ. ಇತಿಹಾಸವನನ್ನು ಪಠ್ಯದಲ್ಲಿ ಅಳವಡಿಸುವುದಲ್ಲಿ ತಪ್ಪೇನಿಲ್ಲ, ಇದರಿಂದ ಕೆಲವರಿಗೆ ಮುಜುಗರ ಆಗಬಹುದು, ಹಾಗಂತ ನಾವು ಹಿಂದೇಟು ಹಾಕಲ್ಲ' ಎಂದು ವಿಧಾನಸೌಧದಲ್ಲಿ ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.

ರಾಮಾಯಣ, ಭಗವದ್ಗೀತೆ ವಿಚಾರಗಳು ಪಠ್ಯದಲ್ಲಿ ಇವೆ, ಈಗ ಹೊಸದಾಗಿ ಕ್ರೆಡಿಟ್ ತೆಗೆದುಕೊಳ್ಳುವ ಅವಶ್ಯಕತೆ ಇಲ್ಲ' 

 2022-23 ನೇ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗುವುದು ಎಂದು ಗುಜರಾತ್‌ ಸರ್ಕಾರ ವಿಧಾನಸಭೆಯಲ್ಲಿ ಘೋಷಿಸಿದೆ.