ಬೆಂಗಳೂರು ಕೇಂದ್ರದ ಸ್ವತಂತ್ರ ಅಭ್ಯರ್ಥಿಯಾಗಿ ನಟ, ನಿರ್ದೇಶಕ ಪ್ರಕಾಶ್ ರಾಜ್ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನ ಮಂದಿರ, ಮಸೀದಿ, ಚರ್ಚ್ ಗೆ ಭೇಟಿ ನೀಡಿದ ಪ್ರಕಾರ್ ರಾಜ್ ಆಶೀರ್ವಾದ ಪಡೆದರು.
ಬೆಂಗಳೂರು[ಮಾ. 22] ನಟನೆ ವೃತ್ತಿ. ರಾಜಕಾರಣ ಬದುಕಿನ ವಿಧಾನ.. ಇಲ್ಲಿ ಯಾರೂ ರಾಜರಿಲ್ಲ, ಇಲ್ಲಿ ಯಾರು ಚರ್ಕವರ್ತಿಗಳು ?.. ಹೀಗಂತ ಪ್ರಶ್ನೆ ಮಾಡಿದ್ದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಪ್ರಕಾಶ್ ರಾಜ್.
ಆ ಕುಟುಂಬದವರನ್ನ ಆಯ್ಕೆ ಮಾಡಿ. ಈ ಜಾತಿಯವರನ್ನ ಆಯ್ಕೆ ಮಾಡಿ ಇದೆಲ್ಲಾ ಏನು..? ಜನರ ಧ್ವನಿಯಾಗುವವರನ್ನ ಆಯ್ಕೆ ಮಾಡಿ ಅಂತ ಕೇಳಿಕೊಳ್ಳುತ್ತಿದ್ದೇನೆ ಅಂತ ಪ್ರಕಾಶ್ ರಾಜ್ ಹೇಳಿದ್ರು. ಇದು ಯಾರ ಭದ್ರಕೋಟೆಯೂ ಅಲ್ಲ. ಹಿಂದಿನ ಸಂಸದರ ರಿಪೋರ್ಟ್ ಕಾರ್ಡ್ ಇದೆ ಜನ ನೋಡ್ತಾರೆ. ಅವರೇ ತೀರ್ಮಾನಿಸ್ತಾರೆ ಅಂತ ಪ್ರಕಾಶ್ ರಾಜ್ ಹೇಳಿದರು.
ಪ್ರಕಾಶ್ ರಾಜ್ ನಾಮಪತ್ರ ಸಲ್ಲಿಕೆಗೆ ಬೆಳಗ್ಗೆಯೆ ಮೆರವಣಿಗೆ ಹೊರಡಬೇಕಾಗಿತ್ತು. ಆದರೆ ಕಾರ್ಯಕರ್ತರು ಸೇರದೆ ವಿಳಂಬವಾಯಿತು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Mar 22, 2019, 5:12 PM IST