ಸಿಎಂ ಪುತ್ರನ ನಾಮಪತ್ರ; ಹೆದ್ದಾರಿ ಸಂಚಾರ ಮಾರ್ಗವೇ ಬದಲು!
ಸಿಎಂ ಪುತ್ರನ ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಮಾರ್ಗವನ್ನೇ ಬದಲು ಮಾಡಲಾಗಿತ್ತು. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವಾಹನಗಳನ್ನ ಮದ್ದೂರಿನಲ್ಲಿ ತಡೆದು, ಮಳವಳ್ಳಿ ಮಾರ್ಗವಾಗಿ ಹೋಗಲು ಅವಕಾಶ ಮಾಡಿಕೊಡಲಾಗಿದ್ದರೆ, ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳನ್ನು ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ತಡೆದು ಬನ್ನೂರು- ಮಳವಳ್ಳಿಯ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮಂಡ್ಯ ಪೊಲೀಸರ ಏಕಾಏಕಿ ಮಾರ್ಗ ಬದಲಾವಣೆಯಿಂದ ಪ್ರಯಾಣಿಕರು ಹೈರಾಣಾಗಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಪುತ್ರನ ನಾಮಪತ್ರ ಸಲ್ಲಿಸುವ ಕಾರ್ಯಕ್ರಮಕ್ಕೆ ಬೆಂಗಳೂರು-ಮೈಸೂರು ಹೆದ್ದಾರಿ ಸಂಚಾರ ಮಾರ್ಗವನ್ನೇ ಬದಲು ಮಾಡಲಾಗಿತ್ತು. ಬೆಂಗಳೂರಿನಿಂದ ಮೈಸೂರಿಗೆ ತೆರಳುವ ವಾಹನಗಳನ್ನ ಮದ್ದೂರಿನಲ್ಲಿ ತಡೆದು, ಮಳವಳ್ಳಿ ಮಾರ್ಗವಾಗಿ ಹೋಗಲು ಅವಕಾಶ ಮಾಡಿಕೊಡಲಾಗಿದ್ದರೆ, ಮೈಸೂರಿನಿಂದ ಬೆಂಗಳೂರಿಗೆ ತೆರಳುವ ವಾಹನಗಳನ್ನು ಶ್ರೀರಂಗಪಟ್ಟಣದ ಶೆಟ್ಟಿಹಳ್ಳಿ ಬಳಿ ತಡೆದು ಬನ್ನೂರು- ಮಳವಳ್ಳಿಯ ಮೂಲಕ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು. ಮಂಡ್ಯ ಪೊಲೀಸರ ಏಕಾಏಕಿ ಮಾರ್ಗ ಬದಲಾವಣೆಯಿಂದ ಪ್ರಯಾಣಿಕರು ಹೈರಾಣಾಗಿದ್ದು, ಪೊಲೀಸ್ ಅಧಿಕಾರಿಗಳ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.