Asianet Suvarna News Asianet Suvarna News

ಶೂಟಿಂಗ್‌ ವೇಳೆ ನಟ ಪ್ರಕಾಶ್ ರಾಜ್‌ಗೆ ಗಾಯ, ಚಿಕಿತ್ಸೆಗಾಗಿ ಹೈದರಾಬಾದ್‌ಗೆ

* ಸಿನಿಮಾ ಶೂಟಿಂಗ್ ವೇಳೆ ನಟ ಪ್ರಕಾಶ್  ರೈ ಗೆ ಗಾಯ
* ಬಹುಭಾಷಾ ಕಲಾವಿದನಿಗೆ ಏಟು
* ಅಭಿಮಾನಿಗಳು  ಆತಂಕಪಡಬೇಕಿಲ್ಲ ಎಂದು ತಿಳಿಸಿದ  ಪ್ರಕಾಶ್

ಚೆನ್ನೈ(ಆ. 10)  ಸಿನಿಮಾ ಶೂಟಿಂಗ್ ವೇಳೆ ಬಹುಭಾಷಾ ಕಲಾವಿದ ಪ್ರಕಾಶ್ ರೈ ಕೈಗೆ ಗಾಯವಾಗಿದೆ. ಶಸ್ತ್ರ ಚಿಕಿತ್ಸೆಗಾಗಿ ಅವರನ್ನು ಹೈದರಾಬಾದ್ ಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ.

ದಡ್ಡತನದಿಂದ ದೊಡ್ಡ ದುರಂತವಾಗಿದೆ, ಸ್ಯಾಂಡಲ್‌ವುಡ್ ಫೈಟರ್ ಸಾವು

ನಟ ಧುನುಷ್ ಅವರ ಬಹು ನಿರೀಕ್ಷಿತ ಚಿತ್ರ 'ತಿರುಚಿತ್ರಾಂಬಲಂ' ಚಿತ್ರದ ಫೈಟಿಂಗ್ ದೃಶ್ಯದ ಚಿತ್ರೀಕರಣವ ವೇಳೆ ಪ್ರಕಾಶ್ ರೈ ಗೆ ಗಾಯವಾಗಿದೆ.  ನಾನು ಆರೋಗ್ಯವಾಗಿದ್ದು ಅಭಿಮಾನಿಗಳು ಆತಂಕ ಪಡಬೇಕಿಲ್ಲ ಎಂದು ಪ್ರಕಾಶ್ ತಿಳಿಸಿದ್ದಾರೆ.