ಕೊಡಗು: ಬೈಗುಳದ ಹಬ್ಬ, ಕಾಡಿನ ಮಕ್ಕಳು ಆಚರಣೆ ಮಾಡುವ ವಿಶಿಷ್ಟ ಹಬ್ಬ

- ಕಾಡಿನ ಮಕ್ಕಳು ಆಚರಣೆ ಮಾಡುವ ವಿಶಿಷ್ಟ ಹಬ್ಬ- ಹಣ ಬೇಡುವ ಬೇಡು ಹಬ್ಬ ಎಂದೂ ಪ್ರಖ್ಯಾತಿ- ಅಯ್ಯಪ್ಪ-ಭದ್ರಕಾಳಿ ದೇವರ ವಿಶಿಷ್ಟ ಆಚರಣೆ 

Share this Video
  • FB
  • Linkdin
  • Whatsapp

ಕೊಡಗು (ಮೇ. 30):  ಜಿಲ್ಲೆಯಲ್ಲಿ ಆಚರಣೆಯಾಗುವ ಗಿರಿಜನರ ಬೈಗುಳುದ ಹಬ್ಬ, ಗಿರಿಜನರು ಹಣ ಬೇಡುವ ಬೇಡು ಹಬ್ಬ, ಅಯ್ಯಪ್ಪ-ಭದ್ರಕಾಳಿ ದೇವರ ವಿಶಿಷ್ಟ ಆಚರಣೆ ವಿವಿಧ ವೇಷಭೂಷಣ ಹಾಕಿ ಕುಣಿಯುತ್ತಿರುವ ಗಿರಿಜನರು. ಕೈಯಲ್ಲಿ ಬುರುಡೆ,ಬಾಯಲ್ಲಿ ಕುಂಡೆ ಹಾಡು, ತಲೆಯಲ್ಲಿ ಮದ್ಯದ ಅಮಲು. 

Add Asianetnews Kannada as a Preferred SourcegooglePreferred

ಇದು ಕೊಡಗು (Kodagu) ಜಿಲ್ಲೆಯಲ್ಲಿ ಕಂಡು ಬರುವ ಗಿರಿಜನರ ರೋಮಾಂಚನಕಾರಿಯಾದ ಕುಂಡೆ ಹಬ್ಬದ ದೃಶ್ಯ.ಕಷ್ಟಪಟ್ಟು ದುಡಿದು ಜೀವನ ಸಾಗಿಸುವ ಕಾಡಿನ ಮಕ್ಕಳು ಆಚರಣೆ ಮಾಡುವುದು ಇದೊಂದೆ ಹಬ್ಬ. ಇದು ಪೊನ್ನಂಪೇಟೆ ತಾಲೂಕಿನ ದೇವರಪುರ ಗ್ರಾಮದಲ್ಲಿ ನಡೆಯುವ ಶ್ರೀ ಅಯ್ಯಪ್ಪ -ಭದ್ರಕಾಳಿ ದೇವರ ಬೇಡು ಹಬ್ಬ. ಆದರೆ ಗಿರಿಜನರಲ್ಲಿ ಇದು ರಾಜ್ಯದಲ್ಲಿ ಕುಂಡೆ ಹಬ್ಬ ಎಂದೇ ಪ್ರಖ್ಯಾತಿಯನ್ನು ಪಡೆದುಕೊಂಡಿದೆ. ಜಿಲ್ಲೆ ಮಾತ್ರವಲ್ಲದೆ ಹೊರಜಿಲ್ಲೆಯಿಂದಲೂ ಸಾವಿರಾರು ಗಿರಿಜನರು ಈ ಹಬ್ಬಕ್ಕೆ ಆಗಮಿಸುತ್ತಾರೆ. ಜಿಲ್ಲೆಯ ವಿವಿಧೆಡೆ ಎರಡು ದಿನಗಳ ಕಾಲ ಜನತೆಯಿಂದ ಹಣ ವಸೂಲಿ ಮಾಡುತ್ತಾರೆ. ಹಣ ನೀಡದಿದ್ದರೆ ಕೆಟ್ಟ ಕೆಟ್ಟ ಬೈಗುಳದ ಗಿಫ್ಟ್ ಸಿಗುತ್ತದೆ. ಆದ್ದರಿಂದ ಇದು ಬೈಗುಳದ ಹಬ್ಬ ಎಂದು ನಾಮಾಂಕಿತವಾಗಿದೆ. ಹಲವು ಬಗೆ ಬಗೆಯ ಕುಂಡೆ ಹಾಡುಗಳು ಈ ಗಿರಿಜನರ ಬಾಯಲ್ಲಿ ಸದಾ ಜಿನುಗುತ್ತಿರುತ್ತದೆ. ಕೊನೆಗೆ ಎಲ್ಲಾ ಗಿರಿಜನರು ಬಂದು ಸೇರುವುದು ಇದೇ ಅಯ್ಯಪ್ಪ-ಭದ್ರಕಾಳಿ ದೇವಾಲಯದಲ್ಲಿ. ತಾವು ವಸೂಲಿ ಮಾಡಿದರಲ್ಲಿ ಸ್ವಲ್ಪ ಹಣವನ್ನು ದೇವರಿಗೆ ಭಂಡಾರ ರೂಪದಲ್ಲಿ ಒಪ್ಪಿಸಿ ಉಳಿದ ಹಣವನ್ನು ಖರ್ಚು ಮಾಡುತ್ತಾರೆ.

ಇನ್ನೂ ಈ ಗಿರಿಜನರು ಹೆಚ್ಚಾಗಿ ಬೈಯುವುದು ಅಯ್ಯಪ್ಪ ದೇವರನ್ನು.ಇದಕ್ಕೆ ಕಾರಣ ಗಿರಿಜನರು ಶ್ರೀ ಅಯ್ಯಪ್ಪ ದೇವರ ಭಕ್ತರು.ಪುರಾತನ ಕಾಲದಲ್ಲಿ ಗಿರಿಜನರು ಅಯ್ಯಪ್ಪ ದೇವರೊಂದಿಗೆ ಕಾಡಿಗೆ ತೆರಳಿದಾಗ ಅಲ್ಲಿ ಭದ್ರಕಾಳಿ ದೇವರ ದರ್ಶನವಾಗುತ್ತದೆ. ಈ ಸಂದರ್ಭ ಅಯ್ಯಪ್ಪ ದೇವರು ಗಿರಿಜನರನ್ನು ಕಾಡಿನಲ್ಲಿ ಬಿಟ್ಟು ಭದ್ರಕಾಳಿ ದೇವರೊಂದಿಗೆ ಹೊರಟುಹೋಗುತ್ತಾನೆ. ಈ ಸಂದರ್ಭ ಗಿರಿಜನರು ಅಯ್ಯಪ್ಪ ದೇವರನ್ನು ನಿಂದಿಸಲು ಪ್ರಾರಂಭ ಮಾಡಿದರು ಎಂಬುವುದು ಇತಿಹಾಸ. ಇನ್ನೂ ಈ ಉತ್ಸವವನ್ನು ಗ್ರಾಮಸ್ಥರು ಶ್ರದ್ದಾಭಕ್ತಿಯಿಂದ ಆಚರಣೆ ಮಾಡುತ್ತಾರೆ. ಒಂದು ಕಡೆ ಗಿರಿಜನರಿಗೆ ಬೈಗುಳದ ಹಬ್ಬವಾದರೆ ಗ್ರಾಮಸ್ಥರು ಭಕ್ತಿಯಿಂದ ಆಚರಣೆ ಮಾಡುವ ಬೇಡು ಹಬ್ಬ.

Related Video