ಆಯೋಧ್ಯೆ ರಾಮ ಮಂದಿರ ಆಹ್ವಾನ ಕುರಿತು ಅಚ್ಚರಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕ!
ಸೋನಿಯಾ ಗಾಂಧಿ, ಖರ್ಗೆ ಸೇರಿ ಇಂಡಿಯಾ ಒಕ್ಕೂಟ ನಾಯಕರಿಗೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಆಹ್ವಾನ, ಮೋದಿ ಭೇಟಿಯಾದ ದೇವೇಗಾಡ, ಹೆಚ್ಡಿ ಕುಮಾರಸ್ವಾಮಿ, ಚಳಿಗಾಲದ ಅಧಿವೇಶನ ಒಂದು ದಿನಕ್ಕೆ ಮೊದಲೇ ಅಂತ್ಯ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ.
ಆಯೋಧ್ಯೆ ರಾಮ ಮಂದಿರ ಪ್ರಾಣಪ್ರತಿಷ್ಠೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಲವರಿಗೆ ಆಹ್ವಾನ ನೀಡಲಾಗಿದೆ. ಆಹ್ವಾನ ಕುರಿತು ಕಾಂಗ್ರೆಸ್ ಹಿರಿಯ ದಿಗ್ವಿಜಯ್ ಸಿಂಗ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಸೋನಿಯಾ ಗಾಂಧಿ ಈ ಕುರಿತು ಪಾಸಿಟೀವ್ ಆಗಿದ್ದಾರೆ. ಸೋನಿಯಾ ಗಾಂಧಿ ರಾಮ ಮಂದಿರ ಪ್ರಾಣ ಪ್ರತಿಷ್ಠೆಗೆ ಹಾಜರಾಗಲಿದ್ದಾರೆ. ಒಂದೇ ವೇಳೆ ಹಾಜರಾಗದಿದ್ದರೆ, ಕಾಂಗ್ರೆಸ್ ನಿಯೋಗ ಆಯೋಧ್ಯೆಗೆ ತೆರಳಲಿದೆ ಎಂದಿದ್ದಾರೆ. ಇಂಡಿಯಾ ಒಕ್ಕೂಟದ ಹಲವು ನಾಯಕರಿಗೆ ಆಹ್ವಾನ ನೀಡಲಾಗಿದೆ.