ಚುನಾವಣೆಗೆ ಮುನ್ನ ಪಂಜಾಬ್ ಸಿಎಂ ರಾಜೀನಾಮೆ: ಕ್ಯಾಪ್ಟನ್ ಇಲ್ಲದೇ ಬಡವಾಯ್ತಾ ಕಾಂಗ್ರೆಸ್.?
- ಪಂಜಾಬ್ ಸಿಎಂ ರಾಜೀನಾಮೆ, ಕಾಂಗ್ರೆಸ್ ಬಿಕ್ಕಟ್ಟು ಮತ್ತಷ್ಟು ಉಲ್ಬಣ
- ಪಂಜಾಬ್ ಕಾಂಗ್ರೆಸ್ಗೆ ಸಂಕಷ್ಟ
- ಇದೇ ಅವಕಾಶ ಬಳಸಿಕೊಂಡು ಅಕಾಲಿದಳ, ಆಪ್ ಮೇಲುಗೈ ಸಂಭವ
ಬೆಂಗಳೂರು (ಸೆ. 19): ಕಾಂಗ್ರೆಸ್ ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟಿಗೆ ಬೇಸತ್ತು ಪಂಜಾಬ್ ಮುಖ್ಯಮಂತ್ರಿ ಹುದ್ದೆಗೆ ಕ್ಯಾಪ್ಟನ್ ಅಮರೀಂದರ್ ಸಿಂಗ್ ಸಿಂಗ್ ರಾಜೀನಾಮೆ ಪ್ರಕಟಿಸಿದ್ದಾರೆ. ವಿಧಾನಸಭೆ ಚುನಾವಣೆಗೆ ಇನ್ನು ಕೇವಲ 5 ತಿಂಗಳು ಮಾತ್ರವೇ ಬಾಕಿ ಇರುವಾಗ ಸಿಂಗ್ ಮುಖ್ಯಮಂತ್ರಿ ಹುದ್ದೆಯಿಂದ ಕೆಳಗೆ ಇಳಿದಿದ್ದು ಕಾಂಗ್ರೆಸ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಬಿಜೆಪಿ ಅಬ್ಬರದ ನಡುವೆ ಒಂದೊಂದೇ ರಾಜ್ಯಗಳನ್ನು ಕಳೆದುಕೊಂಡಿರುವ ಕಾಂಗ್ರೆಸ್ಗೆ ಈ ವಿದ್ಯಮಾನವು ಮುಂದಿನ ಚುನಾವಣೆಯಲ್ಲಿ ಇನ್ನೊಂದು ರಾಜ್ಯ ಕಳೆದುಕೊಳ್ಳುವ ಭೀತಿ ಎದುರಾಗಿದೆ.
ಹೆಚ್ಚುತ್ತಲೇ ಇದೆ ಮೋದಿ ಜನಪ್ರಿಯತೆ: ಏನಿದರ ರಹಸ್ಯ?
ಜಾಬ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಜೊತೆಗಿನ ಮನಸ್ತಾಪ ಮತ್ತು ಶಾಸಕರಿಂದ ವಿರೋಧವನ್ನು ಎದುರಿಸಿದ್ದ ಅಮರೀಂದರ್, ಪಕ್ಷದಲ್ಲಿ ತಮಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಪಂಜಾಬ್ನಲ್ಲಿ ಕಾಂಗ್ರೆಸ್ ಅತಂತ್ರವಾಗುತ್ತಿದೆಯಾ..? ಇಲ್ಲಿದೆ ಡಿಟೇಲ್ಸ್..!